ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!
ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು.
ಆದರೂ ಕೂಡ ಇವರ ಗಲಾಟೆ ಮುಂದುವರೆದಿದ್ದು, ಇದರಿಂದ ಮನನೊಂದ ಕರುಣಾಕರ್ ಇಂದು ಬೆಳಿಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕರುಣಾಕರಿಗೆ ಒಂದು ಗಂಡು ಒಂದು ಹೆಣ್ಣು ಮಗುವಿದೆ. ಘಟನಾ ಸ್ಥಳಕ್ಕೆ ಎಳಸೂರು ಠಾಣೆ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…