ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ ಕಾರುಗಳು ಹಾಗೂ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.

ತೀರ್ಥಹಳ್ಳಿ ಮೂಲದ ಹಮ್ಜಾ ಅಲಿಯಾಸ್ ಅಮೀರ್(39)‌ಚಿಕ್ಕಮಗಳೂರಿನ ಕಡೂರು ಸಾಧಿಕ್(40) ಬಂಧಿತರು.

ಆರೋಪಿಗಳು ನಕಲಿ ಪಾಸ್​​ಪೋರ್ಟ್ ಬಳಸಿ ಬಹ್ರೇನ್​ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಮಾಹಿತಿ ಅರಿತ ಮಾಗಡಿ ಪೊಲೀಸರು ಮುಂಬೈ ಏರ್​ಪೋರ್ಟ್ ಬಳಿ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ.

ನಾಲ್ವರು ಇನ್ಸ್​ಪೆಕ್ಟರ್​ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಹಿಡಿಯಲಾಗಿದೆ. ಸದ್ಯ ಮಾಗಡಿ ಪೊಲೀಸರ ಕಾರ್ಯಾಚರಣೆಗೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ.

3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ

ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್​​ಪೋರ್ಟ್ ಬಳಸಿ ಏರ್​ಪೋರ್ಟ್​ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.

ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು. ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಆರೋಪಿಗಳು ಕನ್ನ ಹಾಕಿದ್ದರು.

ಆರೋಪಿಗಳ ಸೆರೆಗೆ ಎಸ್​​ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಜಿಲ್ಲೆಯ ಮಾಗಡಿ ಠಾಣೆಯ ಇನ್ಸ್​ಪೆಕ್ಟರ್​ ಜಿ.ವೈ.ಗಿರಿರಾಜ್​, ಕುಂಬಳಗೋಡು ಇನ್ಸ್​ಪೆಕ್ಟರ್ ಮಂಜುನಾಥ್, ತಾವರಗೆರೆ ಪಿಐ​ ಮೋಹನ್, ಕುದೂರು ಠಾಣೆಯ ಇನ್ಸ್​ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 25 ಪೊಲೀಸ್​ ಸಿಬ್ಬಂದಿ ಭಾಗಿಯಾಗಿದ್ದರು.

ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್​ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್​​ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್​ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.

ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ

ಪೊಲೀಸರನ್ನು ಕಂಡು ಗನ್​ ತೆಗೆಯಲು ಯತ್ನಿಸಿದ್ದ ವೇಳೆ ಇಬ್ಬರ ಬಂಧನ ಮಾಡಲಾಗಿದೆ. ಕಳ್ಳರ ಹಿಸ್ಟರಿ ನೋಡಿ ಮುಂಬೈ ಪೊಲೀಸರಿಂದ ಏರ್​ಪೋರ್ಟ್​ನಲ್ಲಿ ತಪಾಸಣೆ ಮಾಡಲಾಗಿದ್ದು, ಈ ಹಿಂದೆ ಹಲವು ಬಾರಿ ಬೇರೆ ಬೇರೆ ದೇಶಗಳಿಗೆ ತೆರಳಿದ್ದು ಗೊತ್ತಾಗಿದೆ. ಸದ್ಯ ಕಳ್ಳರನ್ನು ಸೆರೆಹಿಡಿದ ಪೊಲೀಸರಿಗೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಸನ್ಮಾನ ಮಾಡುವಂತೆ ಎಸ್​ಪಿಯಿಂದ ಪತ್ರ ಬರೆಯಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

13 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

15 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

18 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

18 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

19 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

19 hours ago