ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!
ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ ಕಾರುಗಳು ಹಾಗೂ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿ ಮೂಲದ ಹಮ್ಜಾ ಅಲಿಯಾಸ್ ಅಮೀರ್(39)ಚಿಕ್ಕಮಗಳೂರಿನ ಕಡೂರು ಸಾಧಿಕ್(40) ಬಂಧಿತರು.
ಆರೋಪಿಗಳು ನಕಲಿ ಪಾಸ್ಪೋರ್ಟ್ ಬಳಸಿ ಬಹ್ರೇನ್ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಮಾಹಿತಿ ಅರಿತ ಮಾಗಡಿ ಪೊಲೀಸರು ಮುಂಬೈ ಏರ್ಪೋರ್ಟ್ ಬಳಿ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ.
ನಾಲ್ವರು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಹಿಡಿಯಲಾಗಿದೆ. ಸದ್ಯ ಮಾಗಡಿ ಪೊಲೀಸರ ಕಾರ್ಯಾಚರಣೆಗೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ.
3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ
ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್ಪೋರ್ಟ್ ಬಳಸಿ ಏರ್ಪೋರ್ಟ್ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.
ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು. ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಆರೋಪಿಗಳು ಕನ್ನ ಹಾಕಿದ್ದರು.
ಆರೋಪಿಗಳ ಸೆರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಜಿಲ್ಲೆಯ ಮಾಗಡಿ ಠಾಣೆಯ ಇನ್ಸ್ಪೆಕ್ಟರ್ ಜಿ.ವೈ.ಗಿರಿರಾಜ್, ಕುಂಬಳಗೋಡು ಇನ್ಸ್ಪೆಕ್ಟರ್ ಮಂಜುನಾಥ್, ತಾವರಗೆರೆ ಪಿಐ ಮೋಹನ್, ಕುದೂರು ಠಾಣೆಯ ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 25 ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.
ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.
ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ
ಪೊಲೀಸರನ್ನು ಕಂಡು ಗನ್ ತೆಗೆಯಲು ಯತ್ನಿಸಿದ್ದ ವೇಳೆ ಇಬ್ಬರ ಬಂಧನ ಮಾಡಲಾಗಿದೆ. ಕಳ್ಳರ ಹಿಸ್ಟರಿ ನೋಡಿ ಮುಂಬೈ ಪೊಲೀಸರಿಂದ ಏರ್ಪೋರ್ಟ್ನಲ್ಲಿ ತಪಾಸಣೆ ಮಾಡಲಾಗಿದ್ದು, ಈ ಹಿಂದೆ ಹಲವು ಬಾರಿ ಬೇರೆ ಬೇರೆ ದೇಶಗಳಿಗೆ ತೆರಳಿದ್ದು ಗೊತ್ತಾಗಿದೆ. ಸದ್ಯ ಕಳ್ಳರನ್ನು ಸೆರೆಹಿಡಿದ ಪೊಲೀಸರಿಗೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ 20 ಸಾವಿರ ಬಹುಮಾನ ಘೋಷಣೆ ಮಾಡಿದ್ದಾರೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಸನ್ಮಾನ ಮಾಡುವಂತೆ ಎಸ್ಪಿಯಿಂದ ಪತ್ರ ಬರೆಯಲಾಗಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…