40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ
40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ.
ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್ ಈಶ್ವರನಾಯ್ಕ ಎಂಬುವವರು ಕಾಡು ಹಂದಿಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಎಸಿಎಫ್ ಮೋಹನ್ ಕುಮಾರ್ ನೇತೃತ್ವದ ಅಲಗೇರಿಮಂಡ್ರಿ ವ್ಯಾಪ್ತಿಯ ಡಿ.ಆರ್.ಎಫ್.ಓ ನವೀನ್ ಕುಮಾರ್ ತಂಡ ಅಂದಾಜು 40 ಕೆ.ಜಿ ಮಾಂಸ ಸಮೇತ ಆರೋಪಿ ಗಣೇಶ್ ಬಿನ್ ಈಶ್ವರ್ ನಾಯ್ಕ್ ನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಎಸಿಎಫ್ ಮೋಹನ್ ಕುಮಾರ್, ಆರ್ಎಫ್ಒ ಅನಿಲ್ ಕುಮಾರ್, ಡಿ.ಆರ್.ಎಫ್.ಓ ನವೀನ್ ಕುಮಾರ್, ಅರಣ್ಯ ರಕ್ಷಕರಾದ ರಾಜು ಎನ್, ಪುಟ್ಟಸ್ವಾಮಿ, ಭರತ್ ಹಾಗೂ ಇನ್ನಿತರ ಸಿಬ್ಬಂದಿಗಳಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…