HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ
ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ.
ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ.
ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ ತಾಲೂಕು ಇವನಿಂದ 3ಕೆಜಿ 400ಗ್ರಾಂ(3.400ಗ್ರಾಂ )ಹಸಿ ಗಂಧದ ಪೀಸ್ ಹಾಗೂ 3ಗರಗಸವನ್ನು ವಶಕ್ಕೆ ಪಡೆಯಲಾಗಿದೆ.
ಸದರಿ ದಾಳಿಯಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಸಬ್ ಇನ್ಸ್ಪೆಕ್ಟರ್ ವಿನಾಯಕ ಹಾಗೂ ಅವರ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಾನ್ಯ ವಲಯ ಅರಣ್ಯಧಿಕಾರಿ ಅನಿಲ್ ಕುಮಾರ್ ಎಸ್ ಹೊಸನಗರ, dyrfo ಆದ ಅನಿಲ್ ಬೆಳ್ಳೆನವರ್, ರಾಘವೇಂದ್ರ ಗೌಡ ಅರಣ್ಯ ರಕ್ಷಕ, ಪುಟ್ಟಸ್ವಾಮಿ, ರಮೇಶ್, ಸುರೇಶ್ ಅರಣ್ಯ ರಕ್ಷಕ ಇವರು ಪಾಲ್ಗೊಂಡಿದ್ದು, ಸದರಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…