ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು.
ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಜಿಂಕೆಯ ಚರ್ಮಕ್ಕಾಗಿ ಶೋಧ ನಡೆದಿದೆ. ದಾಳಿಯ ಮಾಹಿತಿ ತಿಳಿದ ಜಯರಾಮ್ ಪರಾರಿಯಾಗಿದ್ದಾರೆ. ಆರೋಪಿ ಪತ್ತೆಗೆ ಪ್ರಯತ್ನ ನಡೆಸಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ಅಣ್ಣಪ್ಪ ತಿಳಿಸಿದ್ದಾರೆ. ಜಯರಾಮ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್, ಅರಣ್ಯಪಾಲಕರಾದ ಯಶವಂತ್, ಸುಮಿತಾ, ವೇದನಾಯ್ಕ್, ಉಮೇಶ್, ಶಿವನಗೌಡ ಇನ್ನಿತರರು ಪಾಲ್ಗೊಂಡಿದ್ದರು.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…