ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು.
ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಜಿಂಕೆಯ ಚರ್ಮಕ್ಕಾಗಿ ಶೋಧ ನಡೆದಿದೆ. ದಾಳಿಯ ಮಾಹಿತಿ ತಿಳಿದ ಜಯರಾಮ್ ಪರಾರಿಯಾಗಿದ್ದಾರೆ. ಆರೋಪಿ ಪತ್ತೆಗೆ ಪ್ರಯತ್ನ ನಡೆಸಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ಅಣ್ಣಪ್ಪ ತಿಳಿಸಿದ್ದಾರೆ. ಜಯರಾಮ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್, ಅರಣ್ಯಪಾಲಕರಾದ ಯಶವಂತ್, ಸುಮಿತಾ, ವೇದನಾಯ್ಕ್, ಉಮೇಶ್, ಶಿವನಗೌಡ ಇನ್ನಿತರರು ಪಾಲ್ಗೊಂಡಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…