ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು.

ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹಾಗೂ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ ಗವಟೂರು ಭ್ರಷ್ಟಾಚಾರದಲ್ಲಿ ತೊಡಗಿದ್ದ ವೀಡಿಯೋ ಹಾಗೂ ಅದಕ್ಕೆ ಸಂಬಂಧಿಸಿದ ಅವಾಚ್ಯ ಪದಗಳ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಇದರಿಂದ ಸಮಸ್ತ ನಾಗರೀಕರ ಗೌರವಕ್ಕೆ ಧಕ್ಕೆಯುಂಟಾಗಿದೆ ಈ ಬಗ್ಗೆ ಈಗಾಗಲೇ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಸಭಾತ್ಯಾಗ ನಡೆಸಿ ಗ್ರಾಪಂ ಮುಂಭಾಗದಲ್ಲಿ ಪಕ್ಷದ ಮುಖಂಡರೊಂದಿಗೆ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆ ನೀಡುವಂತೆ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು.ಒಂದು ವಾರದೊಳಗೆ ಅಧ್ಯಕ್ಷೆ ರಾಜೀನಾಮೆ ನೀಡದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಲಾಗಿತ್ತು ಎಂದರು.

ಭ್ರಷ್ಟಾಚಾರದ ಆರೋಪವನ್ನು ಹೊತ್ತುಕೊಂಡು ನಮ್ಮ ಪ್ರತಿಭಟನೆಯನ್ನು ರಾಜಕೀಯ ಪ್ರೇರಿತ ಎಂದು ಹೇಳಿಕೆ ನೀಡಿ ಉದ್ಗಟತನ ಮೆರೆಯುತ್ತಿರುವ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ನ ,25 ರ ಸೋಮವಾರ ವಿನಾಯಕ ಸರ್ಕಲ್ ನಿಂದ ಗ್ರಾಪಂ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರಾಪಂ‌ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ , ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ‌ ಮೇಘರಾಜ್ ,ತಾಲೂಕ್‌ ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ನೇತ್ರತ್ವದಲ್ಲಿ ಕೆರೆಹಳ್ಳಿ ಹೋಬಳಿ ಬಿಜೆಪಿ ಘಟಕದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.

ಜಿಲ್ಲಾ ಬಿಜೆಪಿ ಹಿರಿಯ ಮುಖಂಡ ಆರ್ ಟಿ ಗೋಪಾಲ್ ಮಾತನಾಡಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇದ್ದ ಪಿಡಿಓ ಹುದ್ದೆಗಾಗಿ  ಎರಡು ಲಕ್ಷ ರೂ ಡೀಲೀಂಗ್ ನಡೆಸಿ ಮುಂಗಡವಾಗಿ 40 ಸಾವಿರ ರೂ ಹಣ ಪಡೆದುಕೊಂಡಿರುವ ವೀಡಿಯೋ ಪಟ್ಟಣದ ಗ್ರಾಪಂ ಸದಸ್ಯರೊಬ್ಬ ಬಳಿ ಇದ್ದು ಅದನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದರು.ಈ ವೇಳೆ ಪತ್ರಕರ್ತರು ವೀಡಿಯೋ ನಿಮ್ಮ ಬಳಿ‌ ಇದೆಯಾ ಎಂದು ಪ್ರಶ್ನಿಸಿದಾಗ ನನ್ನ ಬಳಿ ವೀಡಿಯೋ ಇಲ್ಲ ಆದರೆ ಹದಿಮೂರು ನಿಮಿಷ ವೀಡಿಯೋವನ್ನು ನಾನು ಕಣ್ಣಾರೆ ನೋಡಿರುತ್ತೇನೆ ಹಾಗೇಯೆ ಪಟ್ಟಣದ ಹತ್ತು ಹಲವಾರು ಜನರು ಆ ವೀಡಿಯೋವನ್ನು ನೋಡಿರುತ್ತಾರೆ ಎಂದರು.

ಇಂತಹ ಭ್ರಷ್ಟ ಅಧ್ಯಕ್ಷರೊಬ್ಬರು ಪಟ್ಟಣದ ಗ್ರಾಪಂ ಚುಕ್ಕಾಣಿ ಹಿಡಿದಿರುವುದು ಪಟ್ಟಣಕ್ಕೆ ಕಪ್ಪುಚುಕ್ಕೆಯಾದಂತಾಗಿದೆ.ಈ ಹಿನ್ನಲೆಯಲ್ಲಿ ನ.25 ರ ಸೋಮವಾರದಂದು ಬೃಹತ್ ಪ್ರತಿಭಟನಾ ಮೆರವಣಿಗೆ

ಸುಧೀಂದ್ರ ಪೂಜಾರಿ , ಹಿರಿಯ ಮುಖಂಡರಾದ ಎಂ ಬಿ‌ ಮಂಜುನಾಥ್ ,ಸುರೇಶ್ ಸಿಂಗ್, ತಾಪಂ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್ , ಗ್ರಾಪಂ‌ ಮಾಜಿ ಅಧ್ಯಕ್ಷರಾದ ಮಂಜುಳಾ ಕೆ ರಾವ್ , ಪದ್ಮಾ ಸುರೇಶ್ ಸದಸ್ಯರಾದ ರಮೇಶ್ ಪಿ , ಮಲ್ಲಿಕಾರ್ಜುನ್ , ಸುಂದರೇಶ್ , ದೀಪಾ ಸುಧೀರ್ , ಅಶ್ವಿನಿ ರವಿಶಂಕರ್, ದಾನಮ್ಮ ,ವನಮಾಲ  ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

16 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

16 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

20 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

22 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago