ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ
ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ.
ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸಿದರು ಕೂಡ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೀನು ಹಿಡಿದು, ಮಾರಾಟ ಮಾಡಿ ಬದುಕು ಕಟ್ಟಿಕೊಂಡಿದ್ದ ಮೀನಜ್ಜ ಹುಲಿಕಲ್ ನಲ್ಲಿ ತಾವೇ ನಿರ್ಮಿಸಿಕೊಂಡ ಶೆಡ್ ನಲ್ಲಿ ವಾಸ ಮಾಡಿಕೊಂಡಿದ್ದರು. ಪತ್ನಿಯನ್ನು ಕಳೆದುಕೊಂಡು ಏಕಾಂಗಿಯಾಗಿದ್ದ ಮೀನಜ್ಜ ಕಾರವಾರದಲ್ಲಿರುವ ಮೊಮ್ಮಕ್ಕಳು ಕರೆದರೂ ಹೋಗದೇ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದರು.
ಘಟನೆ ತಿಳಿಯುತ್ತಿದ್ದಂತೆ ಸಿಪಿಐ ಗುರಣ್ಣ ಎಸ್ ಹೆಬ್ಬಾಳ, ಪಿಎಸ್ಐ ಶಿವಾನಂದ್ ಕೋಳಿ ಸಿಎಂ ಬಂದೋಬಸ್ತ್ ಗೆ ತೆರಳಿದ್ದ ಕಾರಣ ಎಎಸ್ಐ ಕುಮಾರ್, ಮಾಸ್ತಿಕಟ್ಟೆ ಉಪಠಾಣೆ ಸಿಬ್ಬಂದಿ ಅರುಣೋದಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿಟ್ ಅಂಡ್ ರನ್ ಮಾಡಿದ ಕಾರಿನ ಶೋಧ ಕಾರ್ಯ ಆರಂಭಿಸಿದ್ದಾರೆ.
ಮೀನಜ್ಜ ಕೃಷ್ಣ ದೇವರಿಗೆ ಓರ್ವ ಮಗನಿದ್ದು ಆತ ಕೂಡ ಹಿಂದೆಯೇ ಸಾವನ್ನಪ್ಪಿದ್ದಾರೆ. ಕಾರವಾರದಲ್ಲಿ ಅವರ ಮೊಮ್ಮಕ್ಕಳು ವಾಸಿಸುತ್ತಿದ್ದು ಅಜ್ಜನ ಸಾವಿನ ಸುದ್ದಿ ಕೇಳಿ ಹುಲಿಕಲ್ ಗೆ ದೌಡಾಯಿಸಿದ್ದಾರೆ. ಮೃತದೇಹ ನಗರ ಆಸ್ಪತ್ರೆಯ ಶವಾಗಾರದಲ್ಲಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹುಲಿಕಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೊಮ್ಮಕ್ಕಳು ತಿಳಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…