ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮಠ, ಎದ್ದೇಳು ಮಂಜುನಾಥ ಸೇರಿ ಕೆಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ಘಟನಾ ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಗುರುಪ್ರಸಾದ್‌ ಅವರು ಇತ್ತೀಚೆಗೆ ಎರಡನೇ ಮದುವೆ ಆಗಿದ್ದರು. ಅವರು ನಿನ್ನೆಯಷ್ಟೆ (ನವೆಂಬರ್ 2) ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ಹಲವು ರಿಯಾಲಿಟಿ ಶೋಗಳಲ್ಲಿ ಜಡ್ಜ್‌ ಆಗಿಯೂ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಡೆತ್‌ನೋಟ್‌ ಕೂಡ ಸಿಕ್ಕಿಲ್ಲ. 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್ ಅವರು ಸಾಕಷ್ಟು ಜನರಿಗೆ ಪರಿಚಿತರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.

1972ನೇ ನವೆಂಬರ್ 2 ಗುರುಪ್ರಸಾದ್ ಜನಿಸಿದ್ದರು. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಗುರುಪ್ರಸಾದ್ ಜನಿಸಿದರು.2006 ರಲ್ಲಿ ಮಠ ಸಿನೆಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಆದರು. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗ ನಾಯಕ ಹಾಗೂ ಎರಡನೇ ಸಲ ಸೇರಿದಂತೆ ಹಲವು ಸಿನಿಮಾ ನಿರ್ದೇಶನ ಮಾಡಿದ್ದರು. ಇದೀಗ ಅಡೆಮಾ ಸಿನಿಮಾ ನಡೆಯುತ್ತಿತ್ತು. ಎದ್ದೇಳು ಮಂಜುನಾಥ ಚಲನಚಿತ್ರಕ್ಕೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು. ಅತ್ಯುತ್ತಮ ಚಿತ್ರಕಥೆಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಜಗ್ಗೇಶ್, ಗುರುಪ್ರಸಾದ್ ಯಾರ ಮಾತು ಕೂಡ ಕೇಳುತ್ತಿರಲಿಲ್ಲ. ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದಿರುವ ಹುಡುಗ. ಗುರುಪ್ರಸಾದ ರನ್ನು ನಾನು ಹೆಚ್ಚಿಗೆ ಮಾತನಾಡಿಸುತ್ತಿರಲಿಲ್ಲ. ಗುರುಪ್ರಸಾದ್ ಕುಡಿತದ ಚಟಕ್ಕೆ ಬಿದ್ದು ತುಂಬಾ ಹಾಳಾಗಿದ್ದ. ಒಳ್ಳೆಯ ಬರವಣಿಗೆ ತಾಕತ್ ಹೊಂದಿರುವ ವ್ಯಕ್ತಿಯಾಗಿದ್ದ. ಗುರುಪ್ರಸಾದ್ 1000 ಸಲ ಸಾಯುತ್ತೇನೆ ಎಂದು ಹೇಳಿದ್ದ. ಗುರುಪ್ರಸಾದ್ ಗೆ ನಾನು ಈ ಕುರಿತು ಬಹಳ ಸಲ ಬುದ್ಧಿವಾದ ಹೇಳಿದ್ದೆ.ಗುರುಪ್ರಸಾದ್ ಮೊದಲ ಪತ್ನಿ ಜೊತೆಗೂ ಸರಿಯಾಗಿ ಇರಲಿಲ್ಲ ಎಂದು ಅವರ ಸಾವಿಗೆ ಸಂತಾಪ ಸೂಚಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

17 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

21 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

23 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago