ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ..ಛಿದ್ರ

ಹೇರ್​ ಡ್ರೈಯರ್​​ ಮೆಷಿನ್​​ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರ..ಛಿದ್ರಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬಾಗಲಕೋಟೆ ಇಳಕಲ್ಲದ ಬಸವನಗರದಲ್ಲಿ ನಡೆದಿದೆ.

ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಗಾಯಗೊಂಡವರು.

ಸ್ನೇಹಿತೆಗೆ ಬಂದಿದ್ದ ಪಾರ್ಸಲ್ ನ್ನು ತೆರೆದು ಅದರಲ್ಲಿದ್ದ ಹೇರ್ ಡ್ರೈಯರ್ ಆನ್ ಮಾಡಿದಾಗ ತಕ್ಷಣ ಸ್ಫೋಟಗೊಂಡು ಈಗ ಆಸ್ಪತ್ರೆಗೆ ಸೇರಿದ್ದಾರೆ.

ನಡೆದಿದ್ದೇನು.!?

ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಕೊರಿಯರ್ ಮೂಲಕ ​ಬಂದಿತ್ತು. ಪಾರ್ಸಲ್​​ ಮೇಲೆ ಶಶಿಕಲಾ ಅವರ ಮೊಬೈಲ್​ ನಂಬರ್​ ಇದ್ದ ಹಿನ್ನೆಲೆಯಲ್ಲಿ ಕೊರಿಯರ್​ ಸಿಬ್ಬಂದಿ ಶಶಿಕಲಾ ಅವರಿಗೆ ಕರೆ ಮಾಡಿ, ‘ನಿಮ್ಮ ಹೆಸರಿಗೆ ​ಪಾರ್ಸಲ್​ ಬಂದಿದೆ. ಕಲೆಕ್ಟ್​ ಮಾಡಿ’ ಎಂದಿದ್ದಾನೆ. ಈ ವೇಳೆ ಶಶಿಕಲಾ ‘ನಾನು ಬೇರೆ ಊರಿನಲ್ಲಿದ್ದೇನೆ. ಸ್ನೇಹಿತೆ ಬಸಮ್ಮಾ ಅವರಿಗೆ ಕರೆ ಮಾಡಿ ‘ಯಾವುದೋ ಪಾರ್ಸಲ್ ಬಂದಿದೆ ತೆಗೆದುಕೊ’ ಎಂದು ಹೇಳಿದ್ದಾರೆ.​

ಬಸಮ್ಮಾ ಅವರು ಕೊರಿಯರ್ ಸಿಬ್ಬಂದಿ ಬಳಿ ಪಾರ್ಸಲ್​ ಪಡೆದಿದ್ದಾರೆ. ಪಾರ್ಸಲ್​ ತೆರದು ನೋಡಿದಾಗ ಒಳಗಡೆ ಹೇರ್ ಡ್ರೈಯರ್ ಇತ್ತು. ಆನ್​ ಮಾಡಿದ್ದಾರೆ. ಬಸಮ್ಮಾ ಅವರು ಹೇರ್​ ಡ್ರೈಯರ್ ಸ್ವಿಚ್​​ ಹಾಕಿ ಆನ್​ ಮಾಡಿದಾಗ ಸ್ಫೋಟಗೊಂಡಿದೆ.ಹೇರ್​ ಡ್ರೈಯರ್ ಸ್ಫೋಟದಿಂದ ಬಸಮ್ಮ ಅವರ ಹಸ್ತಗಳು ಛಿದ್ರಗೊಂಡಿದೆ.

ಕೂಡಲೇ ಬಸಮ್ಮ ಅವರನ್ನು ಇಳಕಲ್​ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಳಕಲ್ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಶಿಕಲಾ ಅವರು ಹೇಳುವ ಪ್ರಕಾರ, ಹೇರ್ ಡ್ರೈಯರ್ ಆರ್ಡರ್ ಮಾಡಿಲ್ಲವಂತೆ. ಆದರೆ, ಅವರ ಹೆಸರಲ್ಲಿ ಹೇರ್ ಡ್ರೈಯರ್ ಪಾರ್ಸಲ್ ಹೇಗೆ ಬಂತು? ಹಣ ನೀಡಿದ್ದು ಯಾರು ಎಂಬ ಪ್ರಶ್ನೆ ಉದ್ಭವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

15 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

15 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

15 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

15 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

23 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago