ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ

ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು.

ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು.

ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ ಹಾಗೂ ಭದ್ರಾವತಿ ತಂಡ ದ್ವಿತೀಯ ಸ್ಥಾನ ಪಡೆಯಿತು.

ಟಿ.ಆರ್.ಕೃಷ್ಣಪ್ಪ, ಪದ್ಮಾ ಸುರೇಶ್,ಕಲಾಕೌಸ್ತೂಭಕನ್ನಡ ಸಂಘದಅಧ್ಯಕ್ಷರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿ ಪಿ.ಸುದೀರ್, ಎಂ.ಸುರೇಶಸಿಂಗ್,ದೇವರಾಜ್ ಕುಷನ್,ದಿವಾಕರ ಕೆದಲುಗುಡ್ಡೆ,ಮುರುಳಿಧರ,ಲೀಲಾಶಂಕರ್, ಶೈಲಾ ಅರ್.ಪ್ರಭು,ಗೀತಾಅಣ್ಣಪ್ಪ, ರೇಖಾರವಿ, ಅಶ್ವಿನಿ, ನಾಗರತ್ನದೇವರಾಜ್,ಉಮಾಸುರೇಶ್,ದೀಪಾಸುದೀರ್, ಸೀತಾ,ಗೀತಾ, ಇನ್ನಿತರರು ಹಾಜರಿದ್ದರು.

ರಿಪ್ಪನ್‌ಪೇಟೆಯಲ್ಲಿ ತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತೂಭಕನ್ನಡ ಸಂಘದವರ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು ೬೯ ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದತಾಲ್ಲೂಕ್ ಮಟ್ಟದ ಸೈಕಲ್ ಸ್ಪರ್ಧೇಗೆ ಅರಸಾಳು ವಲಯಅರಣ್ಯಾಧಿಕಾರಿ ಶರಣಪ್ಪ ಕನ್ನಡ ಭಾವುಟಎತ್ತಿ ಹಿಡಿಯುವ ಮೂಲಕ ಚಾಲನೆ ನೀಡಿದರು.

ಸೈಕಲ್ ರೇಸ್ ನಲ್ಲಿ 70 ರ ಪ್ರಾಯದ ತಮ್ಮಯ್ಯ ಹಾಗೂ ಟಿ ಆರ್ ಕೃಷ್ಣಪ್ಪ ಪಾಲ್ಗೊಂಡು ತಮ್ಮಯ್ಯ ಹಾಲುಗುಡ್ಡೆ ರವರು ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿತ್ತು.

ಕಲಾಕೌಸ್ತೂಭ ಕನ್ನಡ ಸಂಘದ ಅಧ್ಯಕ್ಷರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿ ಪಿ.ಸುದೀರ್, ಎಂ.ಸುರೇಶಸಿಂಗ್,ದೇವರಾಜ್ ಕುಷನ್,ದಿವಾಕರ,ಹಿರಿಯಣ್ಣಭಂಡಾರಿ,ಶ್ರೀನಿವಾಸ ಅಚಾರ್,ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮಕ್ಕಳಿಗೆ ಸಂಸ್ಕಾರದೊಂದಿಗೆ ಕಲಿಕೆಗೆ ಅನುಗುಣವಾಗಿ ಪ್ರೋತ್ಸಾಹಿಸಿ

ರಿಪ್ಪನ್‌ಪೇಟೆ ; ಸನಾತನ ಸಂಸ್ಕೃತಿ ಸಂಸ್ಕಾರವನ್ನು ಇಂದಿನ ಯುವ ಪೀಳಿಗಗೆ ತಿಳಿಸುವ ಕೆಲಸವನ್ನು ಪೋಷಕವರ್ಗ ಮಾಡಬೇಕು.ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುವ ಮೂಲಕ ಅವರಲ್ಲಿನಕಲಿಕೆಗನುಗುಣವಾಗಿ ಪ್ರೋತ್ಸಾಹಿಸಿ ಎಂದುಯಕ್ಷಗಾನಕಲಾವಿದ ಪಟ್ಲ ಸತೀಶ್ ಹೇಳಿದರು.

ರಿಪ್ಪನ್‌ಪೇಟೆಯಕಲಾಕೌಸ್ತೂಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿದಸೆಯಲ್ಲಿಯೇ ಮಕ್ಕಳಿಗೆ ಯಕ್ಷಗಾನರಂಗತರಬೇತಿ ನೀಡಿಅವರನ್ನು  ಧರ್ಮ ಜಾಗೃತಗೊಳಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳಸಲು ಸಾಧ್ಯವೆಂದ ಅವರು ಶಾಲಾ ಹಂತದಲ್ಲಿಯಕ್ಷಗಾನದ ಕಲೆಯನ್ನು ವಿದ್ಯಾರ್ಥಿಗಳು ಮೈಗೊಡಿಸಿಕೊಳ್ಳುವಂತೆ ನಮ್ಮ ಸಂಸ್ಥೆ ಸ್ವಂತ ಖರ್ಚಿನಲ್ಲಿ ತಾಲ್ಲೂಕಿನ ಹಲವು ಶಾಲೆಗಳಿಗೆ ಹೋಗಿ ಉಚಿತ ತರಭೇತಿ ನೀಡಲಾಗಿದೆ ಎಂದರು.

ಕಲಾಕೌಸ್ತೂಭಕನ್ನಡ ಸಂಘದಆಧ್ಯಕ್ಷರವೀಂದ್ರ ಕೆರೆಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ಪಿ.ಸುದೀರ್, ಎನ್.ಸತೀಶ್, ಪದ್ಮಸುರೇಶ್, ರೇಖಾ ರವಿ,ನಾಗರತ್ನ ದೇವರಾಜ್, ಗೀತಾ, ಸೀತಾ, ಗೀತಾ ಅಣ್ಣಪ್ಪ,ಲೀಲಾಶಂಕರ್, ಆಶ್ವಿನಿ ಸತೀಶ್, ಉಮಾ ಸುರೇಶ್, ಲಕ್ಷಿö್ಮಶ್ರೀನಿವಾಸ, ಸಂದೀಪಶೆಟ್ಟಿ, ದೀಪಾಸುದೀರ್,ಅಚಾರ್, ಹಿರಿಯಣ್ಣಭAಡಾರಿ,ಕಲಾವತಿಚಂದ್ರಪ್ಪ,ಆಶಾ ಬಸವರಾಜ್, ದಿವಾಕರ, ರಾಘವೇಂದ್ರ ಪ್ರವೀಣ್ಅಚಾರ್,ಶೈಲಾಅರ್.ಪ್ರಭು, ರಾಘುಅರ್ಟ್ಸ್ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago