ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್
ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.
ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು. ಆ ಪರಿಚಯ ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ ಯುವತಿಯ ಮನೆಯವರು ಅಕ್ಷೆಪಿಸಿದ್ದಾರೆ.
ಮನೆಯವರ ಆಕ್ಷೇಪಣೆಯಿಂದ ಹಿಂದೆ ಸರಿದ ಯುವತಿಗೆ ಯುವಕ ಅನೇಕ ಬಾರಿ ಸಂಪರ್ಕಿಸಲು ಪ್ರಯತ್ನಿಸಿದ್ದಾನೆ. ಯುವತಿ ಮದುವೆಯಿಂದ ಹಿಂದೆ ಸರಿದ ವಿಷಯ ತಿಳಿಯುತ್ತಿದ್ದಂತೆ ಸೇಡಿಗೆ ನಿಂತ ಯುವಕ ಯುವತಿ ಜೊತೆಗೆ ಸಲುಗೆಯಿಂದ ಇದ್ದ ಫೊಟೊಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ.
ಬರಿ ಫೋಟೋ ಅಷ್ಟೇ ಅಲ್ಲದೆ ಆಕೆಯ ಅಶ್ಲೀಲ ಫೊಟೊಗಳನ್ನ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದಾನೆ. ಯುವಕನಿಗೆ ಬುದ್ದಿವಾದ ಹೇಳಲು ಬಂದ ಯುವತಿಯ ಕುಟುಂಬಸ್ಥರಿಗೂ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದು ಕೊಲೆ ಬೆದರಿಕೆ ಸಹ ಹಾಕಿರುವುದಾಗಿ ಯುವತಿ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್