ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ
ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ.
ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ.
ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಊರ್ಮಿಳಾ ಕುಮಾರಿ ಮನೆಯ ಬಾಲ್ಕನಿಯಲ್ಲಿ ಹೂವಿನ ಗಿಡಗಳ ನಡುವೆ ಗಾಂಜಾ ಬೆಳೆಸಿರುವುದಾಗಿ ವಿಡಿಯೋ ಮಾಡಿ ಆ ವಿಡಿಯೊವನ್ನು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ಈ ಸಂಬಂಧ ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗಾಂಜಾ ಗಿಡ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಮನೆಯ ಬಾಲ್ಕನಿಯಲ್ಲಿ ಸುಮಾರು 15 ಪಾಟ್ ಗಳಲ್ಲಿ ವಿವಿಧ ಹೂವಿನ ಗಿಡಗಳನ್ನು ಬೆಳೆಸಿದ್ದರು. ಈ ನಡುವೆ ಎರಡು ಪಾಟ್ ಗಳಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಮನೆ ಮೇಲೆ ದಾಳಿ ಮಾಡಿದಾಗ ಆರೋಪಿಗಳು ಭಯಗೊಂಡು ಗಾಂಜಾ ಗಿಡಗಳನ್ನು ಪಾಟ್ ನಿಂದ ಕಿತ್ತು ಡಸ್ಟ್ ಬಿನ್ ಗೆ ಎಸೆದಿದ್ದರು. ಪರಿಶೀಲನೆ ವೇಳೆ ಡಸ್ಟ್ ಬಿನ್ ನಲ್ಲಿ ಮುರಿದ ಗಾಂಜಾ ಗಿಡದ ಎಲೆಗಳು ಹಾಗೂ ಕಾಂಡ ಪತ್ತೆಯಾಯಿತು.
ಬಳಿಕ ಆಕೆಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಗಾಂಜಾ ಗಿಡಗಳ ವಿಡಿಯೋಗಳು ಪತ್ತೆಯಾದವು. ಹೀಗಾಗಿ ಮಾಲುಗಳನ್ನು ಜಪ್ತಿ ಮಾಡಿ ದಂಪತಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…