RIPPONPETE | ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ

ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದಲ್ಲಿ ರೂ. 31,59,164/-ರೂ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸೊಸೈಟಿಯ ವ್ಯವಸ್ಥಾಪಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ರಿಪ್ಪನ್‌ಪೇಟೆ ನಿವಾಸಿ ಪವಿತ್ರಾ ಎನ್ ಬಂಧಿತ ಆರೋಪಿಯಾಗಿದ್ದಾರೆ.

ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಮುಖ್ಯ ಶಾಖೆ ತೀರ್ಥಹಳ್ಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿತಾ ರವರು ದಾಖಲಿಸಿದ ದೂರಿನನ್ವಯ ಪವಿತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ.ಶಾಖೆಗೆ ಸಂಬಂಧಿಸಿದ ವ್ಯವಹಾರದ ಯಾವುದೇ ನಗದು ಹಣವನ್ನು ದಿನದ ಅಂತ್ಯದಲ್ಲಿ ಅಥವಾ ಮಾರನೇ ದಿನ ಸಂಸ್ಥೆಯ ಖಾತೆಯಿರುವ ರಿಪ್ಪನ್ ಪೇಟೆಯ ಎಸ್.ಡಿ.ಸಿ.ಸಿ ಬ್ಯಾಂಕಿನ ಖಾತೆಗೆ ಜಮಾ ಮಾಡಬೇಕಾಗಿರುತ್ತದೆ. ಶಾಖೆಯಿಂದ ಸಾಲ ವಿತರಿಸಿದಲ್ಲಿಯೂ ಸಂಸ್ಥೆಯ ಎಸ್‌.ಡಿ.ಸಿ.ಸಿ ಬ್ಯಾಂಕಿನ ಚೆಕ್ ಮೂಲಕ ಹಣವನ್ನು ತೆಗೆಯಬೇಕಾಗಿರುತ್ತದೆ.ಆದರೆ ನಿಯಮಗಳನ್ನೆಲ್ಲಾ ಉಲ್ಲಂಘಿಸಿ ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿರುವುದಾಗಿ ದೂರು ಸಲ್ಲಿಸಿದ್ದಾರೆ.

ಸಂಘದ ಕೆಲವೊಂದು ಸದಸ್ಯರಲ್ಲಿ ಪವಿತ್ರ ಎನ್ ತನ್ನ ಸ್ವಂತದ ಖಾತೆಗೆ ಯುಪಿಐ ಮೂಲಕ ಹಣ ಹಾಕಿಸಿಕೊಂಡು ಸದಸ್ಯರಿಗೆ ಅವರ ಸಾಲಕ್ಕೆ ಜಮಾ ತೆಗೆದುಕೊಳ್ಳುವುದಾಗಿ ತಿಳಿಸಿರುವುದಾಗಿ ಹೇಳಿರುತ್ತಾರೆ. ಇನ್ನೂ ಕೆಲವು ಸದಸ್ಯರು ಸಂಸ್ಥೆಯಲ್ಲಿ ಯಾವುದೇ ಸಾಲವನ್ನು ಪಡೆದಿರುವುದಿಲ್ಲವೆಂದು ತಿಳಿಸಿದ್ದು, ಅವರ ಹೆಸರಿನಲ್ಲಿ ಸಾಲದ ಖಾತೆ ಸೃಷ್ಟಿಸಿ ಅದರಿಂದ ಹಣ ಪಡೆದುಕೊಂಡಿರುವುದು ಕಂಡುಬಂದಿರುತ್ತದೆ. ಶಾಖೆಗೆ ಬಂದ ಸದಸ್ಯರಿಂದ ಹಣ ಪಡೆದು ಅದನ್ನು ನಗದು ಜಮಾ ತೆಗೆದುಕೊಳ್ಳದೆ ಸಂಸ್ಥೆಯ ಖಾತೆಗೆ ಜಮಾ ಮಾಡದೆ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿರುತ್ತದೆ. ಅಲ್ಲದೇ ರಿಪ್ಪನ್ ಪೇಟೆ ಶಾಕೆಯ ಸದಸ್ಯರಲ್ಲಿ ಸುಮಾರು 60-70 ಸಾಲಗಳನ್ನು ದಾಖಲೆ ಇಲ್ಲದೆ ವಿತರಿಸಲಾಗಿದ್ದೂಇದರಲ್ಲಿ ಹಿಂದಿನ ಆಡಳಿತ ಮಂಡಳಿಯವರು ಶಾಮಿಲಾಗಿರುವುದು ಕಂಡುಬಂದಿರುತ್ತದೆ. 2022-23 ರ ಸಾಲಿನಲ್ಲಿ ಸಾಲ ಪಡೆದು ತೀರುವಳಿ ಮಾಡಿರುವ ಸದಸ್ಯರ ಸಂಭಂದಿಸಿದ ವೈಯಕ್ತಿಕ ದಾಖಲೆಗಳನ್ನು ಅವರಿಗೆ ಹಿಂದಿರುಗಿಸದೆ 2023-24 ನೇ ಸಾಲಿನಲ್ಲಿ ಅದೇ ದಾಖಲೆಗಳನ್ನು ಬಳಿಸಿಕೊಂಡು ಸಾಲ ಸೃಷ್ಟಿಸಿ ಸಂಸ್ಥೆಯ ಹಣವನ್ನು ಲಪಟಾಯಿಸಲಾಗಿರುತ್ತದೆ. ಸಂಸ್ಥೆಯ ಸರ್ವಜನಿಕ ಹಣವಾಗಿದ್ದು, ಸಾರ್ವಜನಿಕರ ರೂ. 31,59,164/- ಹಣವನ್ನು ಮೋಸದಿಂದ ಲಪಟಾಯಿಸಿ ಆ ಉದ್ದೇಶಕ್ಕಾಗಿಯೇ ದಾಖಲೆಗಳನ್ನು ತಿದ್ದಿ, ಸೃಷ್ಟಿಸಿ, ಸಂಸ್ಥೆಯ ರಶೀದಿ ಪುಸ್ತಕ ಸೀಲು ವಗೈರೆ ದಾಖಲೆಗಳನ್ನು ಬಳಸಿಕೊಂಡು ವೈಯಕ್ತಿಕ ಲಾಭಕ್ಕೆ ಉಪಯೋಗಿಸಿಕೊಂಡಿರುವ ಪವಿತ್ರ ಎನ್ ಈಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನನ್ವಯ ಪವಿತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

18 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

18 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

19 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

19 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

24 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

1 day ago