RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ.

ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು ಮೂಡಿಸುವ ಮೂಲಕ ಕುವೆಂಪು ವಿಶ್ವವಿದ್ಯಾಲಯ ಮಟ್ಟದಲ್ಲಿ ತನ್ನದೇ ಆದಂತಹ ಕೀರ್ತಿಯನ್ನು ಗಳಿಸಿ ಸ್ಥಳೀಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿತ್ತು.ಪ್ರತಿ ವರ್ಷ ಈ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತಿತ್ತು.

ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಶಾಲಾ ಕಾಲೇಜುಗಳಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ ಆದರೆ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೂ,ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯವರಿಗೂ ಯಾವುದೇ ಮಾಹಿತಿಯನ್ನು ನೀಡದೇ ಕಾಟಾಚಾರಕ್ಕೆ ಎಂಬುವಂತೆ ಬೆರಳೆಕೆಯಷ್ಟು ಉಪನ್ಯಾಸಕರು ರಾಜ್ಯೋತ್ಸವ ಆಚರಿಸಿ ಕೈತೊಳೆದುಕೊಂಡಿದ್ದು ಈ ಕಾಲೇಜು ಕರ್ನಾಟಕದಲ್ಲಿ ಇದೆಯೋ ಅಥವಾ ತಮಿಳುನಾಡಿನಲ್ಲಿದೆಯೋ ಎಂಬುವುದು ಕನ್ನಡಪರ ಹೋರಾಟಗಾರರ ಆರೋಪವಾಗಿದೆ.

ಈ ಕಾಲೇಜಿನಲ್ಲಿ ಖಾಯಂ ಹಾಗೂ ಅತಿಥಿ ಉಪನ್ಯಾಸಕರು ಸೇರಿದಂತೆ ಮೂವತ್ತಕ್ಕೂ ಅಧಿಕ ಉಪನ್ಯಾಸಕರಿದ್ದರು ಸಹ ರಾಜ್ಯೋತ್ಸವ ಆಚರಣೆಗೆ ಶೇಕಡಾ80% ರಷ್ಟು ಉಪನ್ಯಾಸಕರು ಗೈರು ಹಾಜರಾಗಿ ಕನ್ನಡ ಭಾಷೆಯ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ.

69ನೇ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ಆಚರಿಸುವಂತೆ ರಾಜ್ಯ ಸರ್ಕಾರದ ಖಡಕ್ ಆದೇಶವಿದ್ದರೂ ಸಹ ಕಾಲೇಜಿನ ಪ್ರಾಂಶುಪಾಲರ ನಿರ್ಲಕ್ಷ್ಯದಿಂದಲೋ , ಕಾಲೇಜು ಅಭಿವೃದ್ಧಿ ಸಮಿತಿಯ ಪಾಲ್ಗೊಳ್ಳುವಿಕೆ ಕೊರತೆಯಿಂದಲೋ ಕಾಟಾಚಾರಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಕನ್ನಡ ಉಪನ್ಯಾಸಕರಾದ ಡಾ. ವಿರುಪಾಕ್ಷಪ್ಪ ರವರ ಬಳಿ ಮಾಹಿತಿ ಕೇಳಿದಾಗ ನವೆಂಬರ್ ತಿಂಗಳಿನಲ್ಲಿ ಯಾವಾಗ ಬೇಕಾದರೂ ಕಾರ್ಯಕ್ರಮವನ್ನು ನಡೆಸಬಹುದು ಎಂದು ಹೇಳುವ ಮೂಲಕ ಸರ್ಕಾರದ ಖಡಕ್ ಆದೇಶಕ್ಕೆ ನಿರ್ಲಕ್ಷ್ಯ ತೋರಿದ್ದಾರೆ.

ಒಟ್ಟಾರೆಯಾಗಿ ಕನ್ನಡ ಭಾಷೆಯು ತನ್ನ ವೈವಿಧ್ಯತೆಗಳ ಮೂಲಕ ಜಗತ್ತಿನಲ್ಲಿಯೇ ವೈಶಿಷ್ಟ್ಯತೆ ಹೊಂದಿದ್ದು, ಈ ಆಸ್ಮಿತೆ ಸದಾ ಉಳಿದು-ಬೆಳೆಯುವಂತೆ ಪ್ರಯತ್ನಶೀಲರಾಗಬೇಕಾದ ಉಪನ್ಯಾಸಕರುಗಳು ಕನ್ನಡದ ಬಗ್ಗೆ ಅಸಡ್ಡೆ ತೋರುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago