ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು.

ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ ಅವರ ವಿರುದ್ಧ ಜಯನಗರ ಠಾಣೆಯಲ್ಲಿ ಸುಮೋಟೋ‌ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್‌ ಜಾರಿಗೆ ಬಂದರೆ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಂ ಅವರಿಗೆ ರಸ್ತೆಯಲ್ಲಿ ಹುಡುಕಿ ಹುಡುಕಿ ಹೊಡೆಯುತ್ತಾರೆ. ಇನ್ನು ಭವಿಷ್ಯದಲ್ಲಿ ಮುಸ್ಲಿಂ ಅವರನ್ನು ಕೊಲ್ಲುವಂತಹ ದಿನ ಬರುತ್ತದೆ ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪ ಅವರ ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎಂಬ ಕಾರಣದಿಂದ ಅವರ ವಿರುದ್ಧ ಸುಮೋಟೋ ಕೇಸ್‌ ದಾಖಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ರೈತರ ಭೂಮಿ ಜತೆ ಮಠ, ದೇವಸ್ಥಾನ, ಪುರಾತತ್ವ ಇಲಾಖೆ ಭೂಮಿ, ಸರಕಾರಿ ಶಾಲೆಯ ಜಾಗವನ್ನೂ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸುತ್ತಿದ್ದಾರೆ. ಇದು ಸೂಕ್ತವಲ್ಲ. ಮಠ, ಮಂದಿರ, ಬಡ ರೈತರ ಭೂಮಿ ದೋಚುತ್ತಿರುವ ವಕ್ಫ್ ಮಂಡಳಿ ನಡೆಯಿಂದ ಮುಸ್ಲಿಂ ಸಮುದಾಯ ಅಧೋಗತಿಗೆ ಹೋಗುತ್ತದೆ. ಹಿಂದೂ ಸಮಾಜದ ಆಸ್ತಿ ಕಬಳಿಸುತ್ತಿರುವುದರ ವಿರುದ್ಧ ಎಲ್ಲ ಜಾತಿಯ ಸಾಧು ಸಂತರು ಎಚ್ಚೆತ್ತಿದ್ದಾರೆ. ಇದಕ್ಕಾಗಿ ಹೋರಾಟ ನಡೆಸಲು ಸಿದ್ಧರಾಗಿದ್ದಾರೆ ಎಂದು ವಕ್ಫ್‌ ವಿರುದ್ಧ ಈಶ್ವರಪ್ಪ ಗುಡುಗಿದ್ದರು.

ವಕ್ಫ್‌ ಬೋರ್ಡ್ ಆಸ್ತಿ ವಿವಾದ ಹಿನ್ನೆಲೆ ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಾಸ್ ಪಡೆಯುವ ವಿಚಾರವಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮ್ಯುಟೇಷನ್ ಮಾಡಲು ಯಾವುದೇ ಕಚೇರಿ, ಪ್ರಾಧಿಕಾರದ ನಿರ್ದೇಶನಗಳನ್ನು ತಕ್ಷಣ ಹಿಂಪಡೆಯಬೇಕು. ಮ್ಯುಟೇಷನ್ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದ ಬಳಿಕವೂ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ನೆನಪೋಲೆ ಹೊರಡಿಸುವ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಅಪರ ಕಾರ್ಯದರ್ಶಿ ಡಾ.ಬಿ.ಉದಯ್ ಕುಮಾರ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

18 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

18 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

18 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

1 day ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

1 day ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

1 day ago