Breaking
12 Jan 2026, Mon

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ.

ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದ ಬಗ್ಗೆ ವರದಿಯಾಗಿತ್ತು.

ಶುಕ್ರವಾರ ರಾತ್ರಿ ವಿಪರೀತ ಸಿಡಿಲು ಸಹಿತ ಮಳೆಯಾಗಿದ್ದು ಉದಯ್ ಸಿಡಿಲು ಬಡಿದು ಸಾವನ್ನಪ್ಪಿರಬಹುದು ಅಥವಾ ಗಣಿ ಬ್ಲಾಸ್ಟ್ ನಿಂದ ಸತ್ತಿರಬಹುದು ಎಂಬ ಊಹಾಪೋಹಗಳು ಸ್ಥಳೀಯರಲ್ಲಿ ಹುಟ್ಟಿಕೊಂಡಿತ್ತು.ಈ ಉಹಾಪೋಹಗಳಿಗೆ ಪೂರಕವೆಂಬಂತೆ ಕಲ್ಲು ಕ್ವಾರೆಯ ಮಾಲೀಕರು ಹಾಗೂ ಸಂಬಂಧಿಸಿದವರು ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಮುಟ್ಟಿಸದೇ ಆತುರ ಆತುರದಲ್ಲಿ ಕೋಣಂದೂರು ಆಸ್ಪತ್ರೆಗೆ ಮೃತದೇಹವನ್ನು ಕರೆದೊಯ್ದು ಸ್ವಾಭಾವಿಕ ಸಾವು ಎಂಬ ರಿಪೋರ್ಟ್ ರೆಡಿ ಮಾಡಿಸಿ ರಾತ್ರೋರಾತ್ರಿ ಮೃತದೇಹವನ್ನು ಜಾರ್ಖಂಡ್ ಗೆ ಕಳುಹಿಸಿಕೊಟ್ಟಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.

ಈ ಹಿನ್ನಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಲ್ಲು ಕ್ವಾರೆಗೆ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸಿ ಘಟನೆಯ ಸತ್ಯಾಸತ್ಯತೆ ಬಗ್ಗೆ ತನಿಖೆ ತನಿಖೆ ನಡೆಸುವ ಹಿನ್ನಲೆಯಲ್ಲಿ ಜಾರ್ಖಂಡ್ ಗೆ ಕರೆದೊಯ್ದಿದ್ದ ಉದಯ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ.

ಜಾರ್ಖಂಡ್ ನಿಂದ ತುತ್ತು ಅನ್ನಕ್ಕಾಗಿ ವಲಸೆ ಬಂದಿದ್ದ ಬಡ ಕಾರ್ಮಿಕ ಉದಯ್ ಸಿಡಿಲು ಬಡಿದು ಸತ್ತರೋ..!? ಗಣಿ ಬ್ಲಾಸ್ಟ್ ನಿಂದ ಸತ್ತರೋ ಅಥವಾ ಹೃದಯಾಘಾತದಿಂದ ಸತ್ತರೋ ಎಂಬ ಸತ್ಯಾಸತ್ಯತೆ ಮರಣೋತ್ತರ ಪರೀಕ್ಷೆಯ ನಂತರ ತಿಳಿದುಬರಬೇಕಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version