ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ  ಆಗ್ರಹಿಸಿದರು.

ಪಟ್ಟಣದ ಗ್ರಾಪಂ ಅಧ್ಯಕ್ಷೆ ಹಾಗೂ ಸದಸ್ಯರೊಬ್ಬರು ಪಂಚಾಯತ್ ಪಿಡಿಓ ವರ್ಗಾವಣೆಗೆ 2 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿರುವ ವೀಡಿಯೋ ವದಂತಿ ಮತ್ತು ಗ್ರಾಪಂ ಅಧ್ಯಕ್ಷೆ ಖಾಸಗಿ ವ್ಯಕ್ತಿಗಳಿಗೆ ಅಶ್ಲೀಲ ಪದ ಬಳಸಿ ಅವಮಾನಿಸಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಗ್ರಾಮದ ಪ್ರಥಮ ಪ್ರಜೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು ಜನರಿಗೆ ಏಕವಚನದಲ್ಲಿ ಆಶ್ಲೀಲ ಪದಬಳಕೆ ಮಾಡಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದ 15 ದಿನಗಳಿಂದ ಹರಿದಾಡುತ್ತಿದ್ದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ ಈ ತಕ್ಷಣವೇ ಗ್ರಾಮಾಧ್ಯಕ್ಷೆ ಸಾರ್ವಜನಿಕರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಹಾಗೂ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದರು.

ಭ್ರಷ್ಟಾಚಾರ ಹಾಗೂ ಅಶ್ಲೀಲ ಪದಬಳಕೆಯ ಆರೋಪ ಹೊತ್ತಿರುವ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಕೂಡಲೇ ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯ ರೂಪುರೇಷವನ್ನು ಸಿದ್ದಗೊಳಿಸಿ ಉಗ್ರ ಹೋರಾಟ ನಡೆಸುವುದರೊಂದಿಗೆ ಡಿಸೆಂಬರ್ 9 ರಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಬಿಜೆಪಿ ಪಕ್ಷದ ಶಾಸಕರು ಸದನದಲ್ಲಿ ಚರ್ಚೆಗೆ ತರುವ ಮೂಲಕ ಕಾಂಗ್ರೆಸ್ ದುರಾಡಳಿತವನ್ನು ಜಗಜ್ಜಾಹೀರು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಬಿಜೆಪಿ ಆಧ್ಯಕ್ಷ ಟಿ.ಡಿ ಮೇಘರಾಜ್ ಮಾತನಾಡಿ ರಿಪ್ಪನ್‌ಪೇಟೆ ಪಟ್ಟಣವು ಜಿಲ್ಲೆಯಲ್ಲಿಯೇ ಎಲ್ಲಾ ರಂಗಗಳಲ್ಲಿ ಅತ್ಯುತ್ತಮ ಹೆಸರುಗಳಿಸಿರುವ ಪಟ್ಟಣವಾಗಿದ್ದು ಇಂತಹ ಸುಸಂಸ್ಕೃತ ನೆಲದಲ್ಲಿ ಗ್ರಾಮದ ಪ್ರಥಮ ಪ್ರಜೆಯು ಅಶ್ಲೀಲವಾಗಿ ಗ್ರಾಪಂ ಸದಸ್ಯನೋರ್ವ ಹಾಗೂ ಖಾಸಗಿ ವ್ಯಕ್ತಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದು ಪಟ್ಟಣದ ಗೌರವಕ್ಕೆ ಚ್ಯುತಿ ತಂದಿದ್ದು ,ತಕ್ಷಣವೇ ಗ್ರಾಮಾಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿರುವ ಸಂಭಾಷಣೆಯ ಆಡಿಯೋದ ಜಾಡು ಹಿಡಿದು ಪೊಲೀಸ್ ಇಲಾಖೆ ತನಿಖೆ ನಡೆಸಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಆರೋಪಿತರನ್ನು ಬಂಧಿಸುವಂತೆ ಪ್ರತಿಭಟನಾ ಸಭೆಯಲ್ಲಿ ಆಗ್ರಹಿಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್,ಪ್ರಧಾನ ಕಾರ್ಯದರ್ಶಿ ಸುಂದರೇಶ್ , ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ,ಎಂ ಬಿ ಮಂಜುನಾಥ್,ಸುರೇಶ್ ಸಿಂಗ್, ಆನಂದ್ ಮೆಣಸೆ, ಜಿ.ಡಿ.ಮಲ್ಲಿಕಾರ್ಜುನ, ನಾಗರತ್ನ ದೇವರಾಜ್, ಪದ್ಮ ಸುರೇಶ್, ಲೀಲಾ ಉಮಶಂಕರ್, ಮಂಜುಳಾ ಕೇತಾಜಿರಾವ್, ದೀಪಾ, ವನಮಾಲ, ದಾನಮ್ಮ, ಆಶಾ ತರಕಾರಿ ಯೋಗೇಂದ್ರಗೌಡ,ಗಣೇಶ್ ಕುಕ್ಕಲಲೆ ಹಾಗೂ ಇನ್ನಿತರರು ಪಕ್ಷದ ಮುಖಂಡರು ಹಾಜರಿದ್ದರು.

ಪ್ರತಿಭಟನಾ ಸಭೆಯ ನಂತರ ವಿನಾಯಕ ವೃತ್ತದಿಂದ ಮೆರವಣಿಗೆ ಹೊರಟು ಗ್ರಾಮ ಪಂಚಾಯ್ತಿ ಮುಂಭಾಗದಲ್ಲಿ ಉಪತಹಶೀಲ್ದಾರ್ ಗೌತಮ್ , ತಾಲ್ಲೂಕು ಪಂಚಾಯ್ತಿ ಇಓ ನರೇಂದ್ರ ಹಾಗೂ ಸಿಪಿಐ ಗುರಣ್ಣ ಹೆಬ್ಬಾರ್ ಮನವಿ ಪತ್ರವನ್ನು ನೀಡಿ ಸರ್ಕಾರಕ್ಕೆ ತಲುಪಿಸಲು ಮನವಿ ಮಾಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

2 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

3 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

23 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

24 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

24 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 days ago