RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ
ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ.
ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (ತನ್ವಿ ಮೊಬೈಲ್ ವರ್ಲ್ಡ್) ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್ ಅವರಿಂದ ಪೂಜೆ ನೆರವೇರಿಸಿದ್ದಾರೆ.
ನಾಡಿನೆಲ್ಲೆಡೆ ಲಕ್ಷ್ಮಿ ಪೂಜೆ ಹಾಗೂ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಸೌಹಾರ್ದತೆ ಕಾರಣಕ್ಕೆ ಹಿಂದೂಗಳ ಹಬ್ಬವನ್ನು ಮುಸ್ಲಿಂ ಬಾಂಧವರು ಹಾಗೂ ಮುಸ್ಲಿಂರ ಹಬ್ಬವನ್ನು ಹಿಂದೂ ಧರ್ಮದವರು ಆಚರಿಸುವುದನ್ನು ಅಲ್ಲಲ್ಲಿ ನೋಡಿದ್ದೇವೆ. ಅದೇ ಮಾದರಿಯ ಸುದ್ದಿ ಇಲ್ಲಿ ವರದಿಯಾಗಿದೆ.
ತನ್ನು ಅವರು ಸತತ 5 ವರ್ಷದಿಂದ ಇದೇ ಮಾದರಿಯಲ್ಲಿ ಲಕ್ಷ್ಮೀ ಪೂಜೆಯನ್ನು ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಇಲ್ಲಿ ಮುಸ್ಲಿಂ ಸಂಪ್ರದಾಯದಾಯಂತೆ ಕೂಡ ಧರ್ಮಗುರುಗಳಿಂದ ಪೂಜೆ ನೆರವೇರಿಸಲಾಯಿತು.
ಹಬ್ಬಗಳು ಸಂಬಂಧಗಳನ್ನು ಗಟ್ಟಿಗೊಳಸಿಬೇಕು. ಜಾತಿ- ಧರ್ಮ ನೆಪ ಮಾತ್ರ. ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಹಬ್ಬಗಳನ್ನು ಆಚರಿಸೋಣ. ಸೌಹಾರ್ಧತೆ ಸಾರೋಣ ಎನ್ನುತ್ತಾರೆ ಮೊಬೈಲ್ ಅಂಗಡಿ ಮಾಲೀಕ ತನ್ನು ಅರಸಾಳು
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…