RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ
ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ.
ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (ತನ್ವಿ ಮೊಬೈಲ್ ವರ್ಲ್ಡ್) ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್ ಅವರಿಂದ ಪೂಜೆ ನೆರವೇರಿಸಿದ್ದಾರೆ.
ನಾಡಿನೆಲ್ಲೆಡೆ ಲಕ್ಷ್ಮಿ ಪೂಜೆ ಹಾಗೂ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಸೌಹಾರ್ದತೆ ಕಾರಣಕ್ಕೆ ಹಿಂದೂಗಳ ಹಬ್ಬವನ್ನು ಮುಸ್ಲಿಂ ಬಾಂಧವರು ಹಾಗೂ ಮುಸ್ಲಿಂರ ಹಬ್ಬವನ್ನು ಹಿಂದೂ ಧರ್ಮದವರು ಆಚರಿಸುವುದನ್ನು ಅಲ್ಲಲ್ಲಿ ನೋಡಿದ್ದೇವೆ. ಅದೇ ಮಾದರಿಯ ಸುದ್ದಿ ಇಲ್ಲಿ ವರದಿಯಾಗಿದೆ.
ತನ್ನು ಅವರು ಸತತ 5 ವರ್ಷದಿಂದ ಇದೇ ಮಾದರಿಯಲ್ಲಿ ಲಕ್ಷ್ಮೀ ಪೂಜೆಯನ್ನು ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಇಲ್ಲಿ ಮುಸ್ಲಿಂ ಸಂಪ್ರದಾಯದಾಯಂತೆ ಕೂಡ ಧರ್ಮಗುರುಗಳಿಂದ ಪೂಜೆ ನೆರವೇರಿಸಲಾಯಿತು.
ಹಬ್ಬಗಳು ಸಂಬಂಧಗಳನ್ನು ಗಟ್ಟಿಗೊಳಸಿಬೇಕು. ಜಾತಿ- ಧರ್ಮ ನೆಪ ಮಾತ್ರ. ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಹಬ್ಬಗಳನ್ನು ಆಚರಿಸೋಣ. ಸೌಹಾರ್ಧತೆ ಸಾರೋಣ ಎನ್ನುತ್ತಾರೆ ಮೊಬೈಲ್ ಅಂಗಡಿ ಮಾಲೀಕ ತನ್ನು ಅರಸಾಳು
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…