ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ ಈ ದೂರಿನ ಮೇರೆಗೆ ಮಾದನಾಯಕನಹಳ್ಳಿಯ ಪೊಲೀಸರು. ಶಾಲಾ ಮಾಲೀಕ ಈರತ್ತಯ್ಯನನ್ನು ಪೋಕ್ಸೋ ಆಕ್ಟ್ ಅಡಿಯಲ್ಲಿ ‌ಬಂಧಿಸಿ ಜೈಲಿಗಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಸಾಲದಕ್ಕೆ ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಸಹ ತಮಗಾದ ಕಿರುಕುಳ ಬಗ್ಗೆ ಎಫ್​ಐಆರ್​ನಲ್ಲಿ ವಿವರಿಸಿದ್ದಾರೆ.

ಶಾಲಾ ಮಾಲೀಕನ ಕಾಮಚೇಷ್ಠೆ ವಿವರಿಸಿದ ವಿದ್ಯಾರ್ಥಿನಿ

ನಮ್ಮ ಗ್ರಾಮದಲ್ಲಿರುವ ವಿಭಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುತ್ತೇನೆ. ಈಗ್ಗೆ ಕಳೆದ 4 ತಿಂಗಳಿನಿಂದ ನಮ್ಮ ಶಾಲೆಯ ಸೆಕ್ರೆಟರಿಯಾದ ಈರತ್ತಯ್ಯರವರು ನನ್ನನ್ನು ಒಬ್ಬಳನ್ನೇ ಅವರ ಕ್ಯಾಬಿನ್ ಗೆ ಕರೆಸಿಕೊಂಡು ನನ್ನ ತುಟಿಗೆ ಮುತ್ತನ್ನು ಕೊಟ್ಟರು, ಅವರು ನನ್ನ ಬಳಿ ಪೀರಿಯಡ್ಸ್ ಮತ್ತು ನನ್ನ ದೇಹದ ಅಂಗಾಂಗಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದರು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೆದರಿಸಿದ್ದರಿಂದ ಎಲ್ಲವನ್ನು ಸಹಿಸಿಕೊಂಡಿದ್ದೆ ಎಂದಿದ್ದಾಳೆ.

ಸುಮಾರು 2 ತಿಂಗಳ ಹಿಂದೆ ನನ್ನನ್ನು ಅವರ ಕ್ಯಾಬಿನ್ ಗೆ ಕರೆಸಿಕೊಂಡು ನಿನಗೊಂದು ಉದಾಹರಣೆ ಕೂಡಲೇ ಎಂದು ಕೇಳಿದರು. ನಾನು ಹೇಳಿ ಎಂದೆ, ಅದಕ್ಕೆ ಈರತ್ತಯ್ಯರವರು ನನಗೆ ಆಸೆಯಾಗಿ ನಿನ್ನ ಕರೆದರೆ ಬರುತ್ತೀಯಾ ಎಂದು ಕೇಳಿದರು. ಅಷ್ಟೇ ಅಲ್ಲದೇ ನಿನಗೆ ಅಪ್ಪನ ಪ್ರೀತಿ ಬೇಕಾ ಇಲ್ಲ ನನ್ನ ಪ್ರೀತಿ ಬೇಕಾ ಎಂದು ಕೇಳಿದ್ದಾರೆ. ಆಗ ನಾನು ಭಯಪಟ್ಟು ಏನನ್ನೂ ಹೇಳದೇ ಮಾನಸಿಕವಾಗಿ ಕುಗ್ಗಿ ಹೋದೆ. ಆಗಾಗ ಸ್ಪೆಷಲ್ ಕ್ಲಾಸ್ ಭಾನುವಾರದ ವೇಳೆ ಕ್ಯಾಬಿನ್ ಗೆ ಕರೆದು ಮತ್ತು ಬಸ್ ನಲ್ಲಿ ಹೋಗುವಾಗ ಎಲ್ಲಾ ಮಕ್ಕಳು ಇಳಿದ ಮೇಲೆ ನನ್ನನ್ನು ಲಾಸ್ಟ್ ಸೀಟಿಗೆ ಕರೆದುಕೊಂಡು ಹೋಗಿ ಮುತ್ತು ಕೊಡುವುದು ಮತ್ತು ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟುವುದು ಮಾಡುತ್ತಿದ್ದ. ಇವರು ನಮ್ಮ ಶಾಲೆಯ ಮಾಲೀಕರು ಎಂದು ಅವರಿಗೆ ಭಯಪಟ್ಟು ಸುಮ್ಮನಾಗಿದ್ದೆ. ಈ ರೀತಿ ಕಿರುಕುಳ ಸಹಿಸಿಕೊಂಡು ಸಾಕಾಗಿತ್ತು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಇಷ್ಟೇ ಅಲ್ಲದೆ ಈರಯ್ಯ ಹೆಣ್ಣು ಮಕ್ಕಳ ಎದೆ ಭಾಗ ಮುಟ್ಟಿ ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದನಂತೆ. ಅಸಭ್ಯ ವರ್ತನೆ ಬಗ್ಗೆ ಶಿಕ್ಷಕರು ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಮಾದನಾಯಕನಹಳ್ಳಿಯ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಾಥಮಿಕ ಹಂತದ ತನಿಖೆ ನಡೆಸಿ ಅರೋಪಿಯನ್ನ ಜೈಲಿಗೆ ಕಳುಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

2 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

2 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

3 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

3 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

7 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

9 hours ago