ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್
ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ ಈ ದೂರಿನ ಮೇರೆಗೆ ಮಾದನಾಯಕನಹಳ್ಳಿಯ ಪೊಲೀಸರು. ಶಾಲಾ ಮಾಲೀಕ ಈರತ್ತಯ್ಯನನ್ನು ಪೋಕ್ಸೋ ಆಕ್ಟ್ ಅಡಿಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಸಾಲದಕ್ಕೆ ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಸಹ ತಮಗಾದ ಕಿರುಕುಳ ಬಗ್ಗೆ ಎಫ್ಐಆರ್ನಲ್ಲಿ ವಿವರಿಸಿದ್ದಾರೆ.
ಶಾಲಾ ಮಾಲೀಕನ ಕಾಮಚೇಷ್ಠೆ ವಿವರಿಸಿದ ವಿದ್ಯಾರ್ಥಿನಿ
ನಮ್ಮ ಗ್ರಾಮದಲ್ಲಿರುವ ವಿಭಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುತ್ತೇನೆ. ಈಗ್ಗೆ ಕಳೆದ 4 ತಿಂಗಳಿನಿಂದ ನಮ್ಮ ಶಾಲೆಯ ಸೆಕ್ರೆಟರಿಯಾದ ಈರತ್ತಯ್ಯರವರು ನನ್ನನ್ನು ಒಬ್ಬಳನ್ನೇ ಅವರ ಕ್ಯಾಬಿನ್ ಗೆ ಕರೆಸಿಕೊಂಡು ನನ್ನ ತುಟಿಗೆ ಮುತ್ತನ್ನು ಕೊಟ್ಟರು, ಅವರು ನನ್ನ ಬಳಿ ಪೀರಿಯಡ್ಸ್ ಮತ್ತು ನನ್ನ ದೇಹದ ಅಂಗಾಂಗಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದರು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೆದರಿಸಿದ್ದರಿಂದ ಎಲ್ಲವನ್ನು ಸಹಿಸಿಕೊಂಡಿದ್ದೆ ಎಂದಿದ್ದಾಳೆ.
ಸುಮಾರು 2 ತಿಂಗಳ ಹಿಂದೆ ನನ್ನನ್ನು ಅವರ ಕ್ಯಾಬಿನ್ ಗೆ ಕರೆಸಿಕೊಂಡು ನಿನಗೊಂದು ಉದಾಹರಣೆ ಕೂಡಲೇ ಎಂದು ಕೇಳಿದರು. ನಾನು ಹೇಳಿ ಎಂದೆ, ಅದಕ್ಕೆ ಈರತ್ತಯ್ಯರವರು ನನಗೆ ಆಸೆಯಾಗಿ ನಿನ್ನ ಕರೆದರೆ ಬರುತ್ತೀಯಾ ಎಂದು ಕೇಳಿದರು. ಅಷ್ಟೇ ಅಲ್ಲದೇ ನಿನಗೆ ಅಪ್ಪನ ಪ್ರೀತಿ ಬೇಕಾ ಇಲ್ಲ ನನ್ನ ಪ್ರೀತಿ ಬೇಕಾ ಎಂದು ಕೇಳಿದ್ದಾರೆ. ಆಗ ನಾನು ಭಯಪಟ್ಟು ಏನನ್ನೂ ಹೇಳದೇ ಮಾನಸಿಕವಾಗಿ ಕುಗ್ಗಿ ಹೋದೆ. ಆಗಾಗ ಸ್ಪೆಷಲ್ ಕ್ಲಾಸ್ ಭಾನುವಾರದ ವೇಳೆ ಕ್ಯಾಬಿನ್ ಗೆ ಕರೆದು ಮತ್ತು ಬಸ್ ನಲ್ಲಿ ಹೋಗುವಾಗ ಎಲ್ಲಾ ಮಕ್ಕಳು ಇಳಿದ ಮೇಲೆ ನನ್ನನ್ನು ಲಾಸ್ಟ್ ಸೀಟಿಗೆ ಕರೆದುಕೊಂಡು ಹೋಗಿ ಮುತ್ತು ಕೊಡುವುದು ಮತ್ತು ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟುವುದು ಮಾಡುತ್ತಿದ್ದ. ಇವರು ನಮ್ಮ ಶಾಲೆಯ ಮಾಲೀಕರು ಎಂದು ಅವರಿಗೆ ಭಯಪಟ್ಟು ಸುಮ್ಮನಾಗಿದ್ದೆ. ಈ ರೀತಿ ಕಿರುಕುಳ ಸಹಿಸಿಕೊಂಡು ಸಾಕಾಗಿತ್ತು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.
ಇಷ್ಟೇ ಅಲ್ಲದೆ ಈರಯ್ಯ ಹೆಣ್ಣು ಮಕ್ಕಳ ಎದೆ ಭಾಗ ಮುಟ್ಟಿ ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದನಂತೆ. ಅಸಭ್ಯ ವರ್ತನೆ ಬಗ್ಗೆ ಶಿಕ್ಷಕರು ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಮಾದನಾಯಕನಹಳ್ಳಿಯ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಾಥಮಿಕ ಹಂತದ ತನಿಖೆ ನಡೆಸಿ ಅರೋಪಿಯನ್ನ ಜೈಲಿಗೆ ಕಳುಹಿಸಿದ್ದಾರೆ.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…