ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್ ಬೇಗ್ (22) ಕೊಲೆಗೈದ ಆರೋಪಿಯಾಗಿದ್ದಾನೆ.

ಭಾನುವಾರ ಮಧ್ಯಾಹ್ನ ಊಟ ಮಾಡುವ ವೇಳೆ ತಂದೆ ಮಗನ ನಡುವೆ ಜಗಳ ನಡೆದು ಮಗ ಅಪ್ಪನನ್ನ ಸುತ್ತಿಗೆಯಲ್ಲಿ ಹೊಡೆದು ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯ ವಿಚಾರದಲ್ಲಿ ಅಪ್ಪನ ಕಿರುಕುಳ ಹೆಚ್ಚಾದ ಪರಿಣಾಮ ಈ ಘಟನೆ ನಡೆದಿದೆ. ಅಪ್ಪ ಅಡುಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಡೆದಿದ್ದೇನು..!!??

ತಂದೆ ಮುಸ್ತಫ ಬೇಗ್ ಕಾಂರ್ಪೆಂಟರ್ ಕೆಲಸ ಮಾಡಿಕೊಂಡಿದ್ದು  23 ವರ್ಷದ ಹಿಂದೆ  ಉಮ್ಮೇ ಸಲ್ಮಾ ಎಂಬುವರೊಂದಿಗೆ ಮುಸ್ತಫಾ ಬೇಗ್ ಮದುವೆಯಾಗಿದ್ದು ಶಾಹೀದ್ ಬೇಗ್ ಮತ್ತು ಮತ್ತೊರ್ವ ಮಗಳಿದ್ದು ಇಬ್ಬರು ಮಕ್ಕಳೊಂದಿಗೆ ಚೊಕ್ಕ ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು.

ಮಗಳು ಸಂಬಂಧಿಕರೋರ್ವರ ಮಗನನ್ನು ಪ್ರೀತಿಸುತ್ತಿದ್ದ ವಿಷಯ ಮುಸ್ತಫಾಗೆ ಇಷ್ಟಿರಲಿಲ್ಲ. ಮಗಳ ಪ್ರೀತಿಯ ವಿಷಯ ಗೊತ್ತಾಗುತ್ತಿದ್ದಂತೆ ಮದ್ಯ ಸೇವಿಸಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಹೆಂಡತಿ ಮತ್ತು ಮಗಳ ಶೀಲದ ಮೇಲೆ ಅನುಮಾನ ಪಡುತ್ತಿದ್ದ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಮನೆಯ ಮರ್ಯಾದೆ ಹೋದರೆ ಮಗಳನ್ನ ಬೇರೆ ಯಾರೂ ಮದುವೆಯಾಗೊಲ್ಲ ಎಂದು ಮಗ ಶಾಹೀದ್ ಅಪ್ಪನನ್ನ ಜಗಳ ತೆಗೆದಾಗಲೆಲ್ಲ ಸಮಧಾನಪಡಿಸುತ್ತಿದ್ದನು.

ಆದರೆ ಮುಸ್ತಫಾನ ಹಿಂಸೆ ವಿಪರೀತಗೊಂಡ ಹಿನ್ನಲೆಯಲ್ಲಿ ಮಗಳು ಹೇಳದೆ ಕೇಳದೆ ಮನೆ ಬಿಟ್ಟು ಹೋಗಿದ್ದು, ಅವಳನ್ನ ತಾಯಿ ಹುಡುಕಿ ಬೆಂಗಳೂರಿನಿಂದ ವಾಪಾಸ್ ಕರೆದುಕೊಂಡು ಬಂದಿದ್ದರು.

ನಂತರ ತಾಯಿ ಮಗನಿಗೆ ಕರೆಮಾಡಿ ತಂದೆ ಎಷ್ಟು ಹೇಳಿದರೂ ಒಪ್ಪುತ್ತಿಲ್ಲ. ಪೊಲೀಸ್ ದೂರು ಕೊಡೋಣ ಎಂದು ತಿಳಿಸಿದ್ದಾಳೆ. ದೂರು ಕೊಟ್ಟರೆ ಮರ್ಯಾದೆ ಹೋಗುತ್ತದೆ. ನಾನು ಅಪ್ಪನ ಬಳಿ ಮಾತನಾಡುತ್ತೇನೆಂದು ಭರವಸೆ ನೀಡಿ ಮದ್ಯಾಹ್ನದ ಊಟದ ವೇಳೆಗೆ ಆಶ್ರಯ ಬಡಾವಣೆಯಲ್ಲಿರುವ ಮನೆಗೆ ಹೋಗಿ ಅಪ್ಪನೊಂದಿಗೆ ಮಾತನಾಡುತ್ತಾನೆ.

ಮಾತನಾಡಿದರೂ ಒಪ್ಪದ ಹಿನ್ನೆಲೆಯಲ್ಲಿ ಮಗನನ್ನು ತಂದೆ ಹೊಡೆಯಲು ಬಂದಿದ್ದು ಮಗ ಸುತ್ತಿಗೆಯಿಂದ ತಂದೆಯನ್ನ ಹೊಡೆದು ಕೊಲೆ ಮಾಡಿರುವುದಾಗಿ ಎಫ್ಐಆರ್ ನಲ್ಲಿ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

50 minutes ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

3 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

3 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

3 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

11 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

1 day ago