ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!
ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ.
ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಗ್ಗಲೂರಿನಲ್ಲಿ ನಡೆದಿದೆ. ಹರ್ಷಿತಾ ಮತ್ತು ಮನು ದಂಪತಿಯ ಒಂದೂವರೆ ತಿಂಗಳಿನ ಕಂದಮ್ಮ ಅಮಾನವೀಯವಾಗಿ ಸಾವನ್ನಪ್ಪಿದ ಕಂದಮ್ಮ. ಒಂದೂವರೆ ವರ್ಷದ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಈ ದಂಪತಿಗೆ ಏಳು ತಿಂಗಳಿಗೆ ಅವಧಿ ಪೂರ್ವ ಮಗು ಜನನವಾಗಿತ್ತು. ಸಿಜೇರಿಯನ್ ಮೂಲಕ ಮಗು ಜನನ ಆಗಿದ್ದು, ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಒಂದು ತಿಂಗಳು ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖವಾದ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಮಹಾಲಕ್ಷ್ಮಿ ಮನೆಗೆ ಬಂದಿದ್ದರಿಂದ ಎರಡು ಕುಟುಂಬದವರು ಖುಷಿಯಾಗಿದ್ದರು. ಆದ್ರೆ, ನಿನ್ನೆ(ನವೆಂಬರ್ 04) ತೊಟ್ಟಿಲಲ್ಲಿದ್ದ ಮಗು ನಿಗೂಢವಾಗಿ ನಾಪತ್ತೆಯಾಗಿ ಮನೆ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಹತ್ತಿರದ ಸಂಬಂಧಿಕರಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ.
ಇನ್ನೂ ಅಂತರ್ಜಾತಿ ವಿವಾಹ ಆದ್ದರಿಂದ ತಾಯಿ ಮತ್ತು ಮಗುವಿಗೆ ತವರು ಮನೆಯಲ್ಲೇ ಹಾರೈಕೆ ಮಾಡಲಾಗುತ್ತಿತ್ತು. ಪತಿ ಮನು ಮಾತ್ರ ಆಗಾಗ ಬಂದು ಹೋಗುತ್ತಿದ್ದ. ನಿನ್ನೆ ಸಹ ಮನೆಗೆ ಬಂದಿದ್ದ ಮನು ಮಗಳ ಜೊತೆ ಕೆಲಹೊತ್ತು ಆಟವಾಡಿ ಕೆಲಸಕ್ಕೆ ತೆರಳಿದ್ದಾನೆ. ಮಧ್ಯಾಹ್ನ 12:30 ರ ಸುಮಾರಿಗೆ ಕರೆ ಮಾಡಿದ ಪತ್ನಿ ಹರ್ಷಿತಾ ತಾನು ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ತೊಟ್ಟಿಲಲ್ಲಿದ್ದ ಮಗು ಕಾಣುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾಳೆ. ಬಳಿಕ ಎರಡು ಕಡೆ ಕುಟುಂಬದವರು ಎಲ್ಲಾ ಕಡೆ ಹುಡುಕಾಡಿದರು ಮಗುವಿನ ಸುಳಿವಿಲ್ಲ. ಕೊನೆಗೆ ಆತಂಕಗೊಂಡು ಸೂರ್ಯನಗರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರ ಪರಿಶೀಲನೆ ವೇಳೆ ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ.
ತೊಟ್ಟಿಲಲ್ಲಿ ಬೆಚ್ಚಗೆ ಮಲಗಿದ್ದ ಮಗು ಸಿಂಟೆಕ್ಸ್ ಟ್ಯಾಂಕ್ ನಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈಗಾಗಲೇ ಬೆರಳಚ್ಚು, ಶ್ವಾನದಳ, ಸೋಕೋ ಟೀಮ್ ನಿಂದ ಸಾಕ್ಷ್ಯ ಕಲೆ ಹಾಕಿದೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಬಂದ ಬಳಿಕ ಮಗುವಿನ ಸಾವಿನ ರಹಸ್ಯ ಜೊತೆ ಆರೋಪಿಗಳ ಸುಳಿವು ಸಿಗಲಿದೆ.
ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಮಗುವನ್ನು ಹಾಕುವ ಮುನ್ನ ಉಸಿರುಗಟ್ಟಿಸಿ ಕೊಂದಿರುವ ಸಾಧ್ಯತೆ ಇದ್ದು, ತೀರ ಹತ್ತಿರದ ಸಂಬಂಧಿಕರಿಂದಲೇ ಮಗು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…