ಸಿಗಂದೂರು ಬಳಿಯಲ್ಲಿ ತೆಪ್ಪ ಮುಳುಗಿ ಮೂವರು ಕಣ್ಮರೆ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ.
ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ.
ಚೇತನ್, ಸಂದೀಪ್ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.
ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ.
ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ.
ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರ ಮೂಲದ ಐವರು ಯುವಕರು ಕಳಸವಳ್ಳಿ ಬದಿಯ ಹಿನ್ನೀರಿಗೆ ತೆರಳಿದ್ದಾರೆ. ಅಲ್ಲಿಯೇ ದಡದಲ್ಲಿದ್ದ ಉಕ್ಕುಡವನ್ನು ಬಳಸಿ ಹಿನ್ನೀರಿನ ಇನ್ನೊಂದು ಬದಿಗೆ ಊಟಕ್ಕೆ ತೆರಳಿದ್ದಾರೆ. ಅಲ್ಲಿಂದ ವಾಪಸ್ ಬರುವಾಗ ಉಕ್ಕುಡದ ಒಳಗೆ ನೀರು ನುಗ್ಗಲು ಆರಂಭವಾಗಿದೆ. ಪರಿಣಾಮ ಉಕ್ಕುಡದಲ್ಲಿದ್ದವರು ಮುಳುಗುವಂತಾಗಿದೆ. ಆಗ ಐವರ ಪೈಕಿ ಇಬ್ಬರು ಈಜಿಕೊಂಡು ದಡಕ್ಕೆ ಬಂದಿದ್ದಾರೆ. ಉಳಿದ ಮೂವರು ನೀರಿನಲ್ಲಿ ಮುಳುಗಿದ್ದಾರೆ.
ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ,ಪೊಲೀಸರು ದೌಡಾಯಿಸಿದ್ದು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…