Breaking
12 Jan 2026, Mon

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ..

ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ ಹಾವು ಸೇರಿರುವುದು ಗೊತ್ತಾಗಿದೆ. ಕೇರೆ ಹಾವೊಂದನ್ನ ಅಟ್ಟಿಸಿಕೊಂಡು ಬಂದ ಕಾಳಿಂಗ ಮನೆಯೊಳಗೆ ನುಗ್ಗಿದೆ. ಆ ಬಳಿಕ ಭಯಗೊಂಡು ಅಲ್ಲಿಯೇ ಇದ್ದ ಸೂಟ್‌ಕೇಸ್‌ನೊಳಗೆ ಸೇರಿಕೊಂಡಿತ್ತು. ಇದರಿಂದ ಮನೆಯವರು ಗಾಬರಿಯಾದರು.

ಬಳಿಕ ಮನೆಯವರು ಉರಗ ಸಂರಕ್ಷಕ ಚಂದ್ರು ಹಾಗೂ ನರೇಶ್ ಅವರನ್ನಿ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಅವರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಅದನ್ನು ಬಿಡುಗಡೆ ಮಾಡಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *