ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು
ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ದಂಪತಿ ನಡುವೆ ರಾತ್ರಿ ಇಡೀ ಜಗಳ ನಡೆದಿದ್ದು, ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ನಾಗರಾಜ ತನ್ನ ಪತ್ನಿ ರೇಣುಕಾಳನ್ನು ಕಂದಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ.
ಮೃತ ರೇಣುಕಾಳ ಶವ ಮನೆ ಮುಂಭಾಗದಲ್ಲಿ ಪತ್ತೆಯಾಗಿದ್ದು, ಆರೋಪಿ ನಾಗರಾಜನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಎಸ್ಪಿ ಮಿಥುನ್ ಕುಮಾರ್ ವಾಟ್ಸಾಪ್ ಮೂಲಕ ಮಾಹಿತಿ ರವಾನೆ ಮಾಡಿದ್ದು, ಶಿಕಾರಿಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಕೊಲೆ ನಡೆದಿದೆ. 45 ವರ್ಷದ ನಾಗರಾಜ್ ಎಂಬಾತ ತನ್ನ ಪತ್ನಿಯನ್ನ ಕೊಲೆ ಮಾಡಿದ್ದಾನೆ. ಆತನನ್ನ ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ವೈವಾಹಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ ಈ ಕೃತ್ಯವೆಸಗಿರುವುದಾಗಿ ತಿಳಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…