ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು
ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ.
ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು.
ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ ಯಾರಿಗೂ ಹೇಳದೆ ಮನೆಗೆ ಹೋಗಿದ್ದರು. ಸಂಜೆ ಹೊತ್ತು ಎಷ್ಟು ಹೊತ್ತಾದರೂ ಬಾರದ ಮಗನಿಗೆ ಪೋಷಕರ ಹುಡುಗಾಟ ಆರಂಭಿಸಿ, ಆತನ ಸ್ನೇಹಿತರನ್ನು ವಿಚಾರಿಸಿದಾಗ ಚಾನೆಲ್ ಗೆ ಇಳಿದಾಗ ಮುಳುಗಿ ಕಾಣೆಯಾದ ಸಂಗತಿಯನ್ನು ಬಾಯಿಬಿಟ್ಟಿದ್ದಾರೆ.
ಕೂಡಲೇ ಅಗ್ನಿಶಾಮಕದಳ ದವರಿಗೆ ಕರೆ ಮಾಡಿದಾಗ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಯತ್ನಿಸಿದರೂ ಮೋಹಿತ್ ಪತ್ತೆಯಾಗಿರಲಿಲ್ಲಿ. ಗುರುವಾರ ಬೆಳಿಗ್ಗೆ ಆತನ ಮೃತ ದೇಹ ಪತ್ತೆಯಾಗಿದೆ.
ಮೋಹಿತ್ ಶಿವಮೊಗ್ಗದ ಎನ್ ಇ ಎಸ್ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…