ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್ ನಲ್ಲಿ 49 ಜನ ಪ್ರಯಾಣಿಕರಿದ್ದು  27 ಜನರಿಗೆ ಗಂಭೀರ ಗಾಯವಾಗಿದೆ. ಇವರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ 16 ರಿಂದ 18 ಆಂಬುಲೆನ್ಸ್ ಗಳಲ್ಲಿ ಮಣಿಪಾಲ್ ಹಾಗೂ ಮಂಗಳೂರಿಗೆ ರವಾನಿಸಲಾಗಿದೆ.

ಅಪಘಾತದ ವಿಷಯ ತಿಳಿಯುತಿದ್ದಂತೆ ಆಸ್ಪತ್ರೆಗೆ ದಿಡೀರ್ ದೌಡಾಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಖುದ್ದು ನಿಂತು ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ದೊರಕಿಸಿಕೊಟ್ಟು ಸ್ವಂತ ಖರ್ಚಿನಲ್ಲಿ ಮಂಗಳೂರು ಹಾಗೂ ಮಣಿಪಾಲ್ ಗೆ ಆಂಬುಲೆನ್ಸ್ ವ್ಯವಸ್ತೆ ಮಾಡಿಕೊಟ್ಟಿದ್ದಾರೆ.

ನಂತರ ಮಾತನಾಡಿದ ಶಾಸಕ ಬೇಳೂರು ಮಂಗಳೂರು ಪುತ್ತೂರು ಸಮೀಪದಿಂದ ಬಂದಿರುವ ಪ್ರವಾಸಿಗರ ಬಸ್ಸು ಕಾರ್ಗಲ್ ಬಳಿ ಅಪಘಾತವಾಗಿದ್ದು ಈ ಬಗ್ಗೆ ಅಲ್ಲಿನ ಸ್ಥಳೀಯ ಶಾಸಕ ರಾಜೇಶ್ ನಾಯ್ಕ್ ಕರೆ ಮಾಡಿದ ನಂತರ ನನಗೆ ವಿಷಯ ತಿಳಿದಿದ್ದು ಕೂಡಲೇ ಆಸ್ಪತ್ರೆಗೆ ಧಾವಿಸಿ ಬಂದು ಸೂಕ್ತ ಚಿಕಿತ್ಸೆಗೆ ಸೂಚಿಸಿ ಎಲ್ಲಾ ಗಾಯಾಳುಗಳಿಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇನೆ , ಈ ಸಂಧರ್ಭದಲ್ಲಿ ಸ್ಥಳೀಯರು , ಪತ್ರಕರ್ತರು , ಆಂಬುಲೆನ್ಸ್ ಚಾಲಕರು , ವೈದ್ಯರು ಸಕಾಲಕ್ಕೆ ಸ್ಪಂದಿಸಿದ್ದಾರೆ ಅವರೆಲ್ಲಾರಿಗೂ ಧನ್ಯವಾದಗಳು ಎಂದರು.

ರಜೆ ಇದ್ದ ಕಾರಣ ಕುಟುಂಬಸ್ಥರೆಲ್ಲ  ವಾಹನ ಮಾಡಿಕೊಂಡು ಪ್ರವಾಸಿ ತಾಣಗಳಿಗೆ ತೆರಳಿತ್ತಿದ್ದಾಗ ಈ ಘಟನೆ ನಡೆದಿದೆ.

ಕಾರ್ಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

24 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago