ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳವಾರ ಬೆಳಿಗ್ಗೆ ೬-೩೦ ಕ್ಕೆ ವಾಕಿಂಗ್ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ ಪ್ರತಿನಿತ್ಯ ಮನೆಯ ಹಿಂಭಾಗದಲ್ಲಿರುವ ತೋಟಕ್ಕೆ ತೆರಳಿ ವಾಕಿಂಗ್ ಮಾಡಿಕೊಂಡು ವಾಪಾಸ್ ಆಗುತ್ತಿದ್ದರು. ಆದರೆ ಇಂದು ವಾಕಿಂಗ್ ಗೆ ಹೋದವರು ವಾಪಾಸಾಗಿರಲಿಲ್ಲ. ನಿಗದಿತ ಸಮಯಕ್ಕೆ ಮನೆಗೆ ವಾಪಾಸ್ ಆಗದ ಹೇಮಾವತಿಯನ್ನ ಹುಡುಕಿಕೊಂಡು ಹೋರಟ ಪತಿ ದೇವೇಂದ್ರಪ್ಪನವರಿಗೆ ಬೆಳಿಗ್ಗೆ ೯-೩೦ ಕ್ಕೆ ಅವರದೆ ತೋಟದ ಮಾವಿನ ಮರದಲ್ಲಿ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು. ಪ್ರಕರಣ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಎಂದು ದಾಖಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…