ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು
ಶಿವಮೊಗ್ಗ : ಮೊಬೈಲ್ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಯುವತಿ ಮೊದಲ ವರ್ಷದ ಪದವಿ ಓದುತ್ತಿದ್ದಳು. ಮನೆಯಲ್ಲಿ ಓದುವುದು ಬಿಟ್ಟು ಮೊಬೈಲ್ ನೋಡುತ್ತ ಕೂತಿದ್ದಿಯ ಎಂದು ತಾಯಿ ಬೈದಿದ್ದಾರೆ. ಇದರಿಂದ ಮನನೊಂದು ವಿಷ ಸೇವಿಸಿದ್ದಾಳೆ. ಮೂರು ದಿನ ಆಕೆ ಜೀವನ್ಮರಣ ಸ್ಥಿತಿಯಲ್ಲಿದ್ದಳು.
ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…