ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ
ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ.
2024 ರ ಏಪ್ರಿಲ್ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಧಾರ್ಮಿಕ ಕ್ಷೇತ್ರದ ಸನ್ನಿದಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಈ ಪ್ರದೇಶದಲ್ಲಿ ಕಾನೂನು ಬಾಹಿರ ಚುಟವಟಿಕೆ ನಡೆಯುತ್ತಿದೆಯೆ ಎಂಬ ಅನುಮಾನಕ್ಕೂ ಕಾರಣವಾಗಿತ್ತು. ಅಲ್ಲದೆ ಪ್ರಕರಣದಲ್ಲಿ ಯಾವೊಂದು ಸುಳಿವು ಸಹ ಸಿಕ್ಕಿರಲಿಲ್ಲ. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೆಲ್ಲಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಆನಂತರ ಕೆಲವು ದಿನಗಳ ತನಿಖೆಯ ಬಳಿಕ ಲಾಡ್ಜ್ ನಲ್ಲಿ ಕೊಲೆಯಾದ ಯುವತಿ ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ಉಮಾ ಎಂದು ಗೊತ್ತಾಗಿತ್ತು.
ಪೊಲೀಸರಿಗೆ ಕೊಲೆಯಾದ ಯುವತಿಯ ಬಗ್ಗೆ ಮಾಹಿತಿ ಲಭ್ಯವಾಗಿದ ಬಳಿಕವೂ ಪ್ರಕರಣ ತಾರ್ಕಿಕ ಅಂತ್ಯ ಕಂಡಿರಲಿಲ್ಲ. ಏಕೆಂದರೆ ಪ್ರಕರಣದ ಆರೋಪಿ ಪತ್ತೆಯಾಗಿರಲಿಲ್ಲ. ಇದೀಗ ಆರೋಪಿ ಪತ್ತೆಯಾಗಿದ್ದು, ದಿನ ಪೊಲೀಸರ ಕೈಗೆ ಸಿಗದೇ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸಿನಿಮಾ ಸ್ಟೈಲ್ನಲ್ಲಿ ಹಿಡಿದು ತಂದಿರುವ ಬಗ್ಗೆ ಮಾಹಿತಿ ಇದೆ. ಆದಾಗ್ಯು ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಸಿಗಬೇಕಿದೆ.
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…
ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…