ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR
ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ.
30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮ ವರ್ಷದ ವ್ಯಕ್ತಿ ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿದ್ದನು. ಮನೆ ಬಿಟ್ಟು ಹೊರ ಬರುವ ಮಹಿಳೆಗೆ ಕೆಟ್ಟ ದೃಷ್ಠಿಯಿಂದ ನೋಡುವುದು, ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಬ್ಬೇರಿಸುವುದನ್ನು ಮಾಡುತ್ತಿದ್ದನು. ವ್ಯಕ್ತಿಯ ಬಗ್ಗೆ ಮಹಿಳೆ ನಿರ್ಲಕ್ಷ್ಯಿಸಿದ್ದರು.
ಆದರೆ ನ.28 ರಂದು ಮಕ್ಕಳು ಮನೆಯ ಎದುರು ಆಡುತ್ತಿದ್ದು ಅವರನ್ನು ಮನೆಯ ಒಳಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ವಿವಾಹಿತ ಮಹಿಳೆಯ ಮನೆಯ ಒಳಗೆ ವ್ಯಕ್ತಿ ನುಗ್ಗಿ ಮಹಿಳೆಯನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಮಹಿಳೆ ಕಿರುಚಿದ ಕಾರಣ ಅಕ್ಕಪಕ್ಕದ ಜನ ಧಾವಿಸಿದಾಗ ತಕ್ಷಣವೇ ವ್ಯಕ್ತಿ ಪರಾರಿಯಾಗಿದ್ದಾನೆ.
ಈ ಕುರಿತು ಸೇವಾಲಾಲ್ ದೇವಸ್ಥಾನದಲ್ಲಿ ತೀರ್ಮಾನ ನಡೆಸಲಾಗಿತ್ತು. ಈ ಸಭೆಯಲ್ಲಿ ನೊಂದ ಮಹಿಳೆಯ ಪತಿ ಭಾಗಿಯಾಗಿದ್ದರು. ಆದರೆ ಪಂಚಾಯಿತಿಯಲ್ಲಿ ನಿನ್ನ ಹೆಂಡತಿಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಲಾಗದೆ ಪಂಚಾಯಿತಿಗೆ ಬಂದಿದ್ದೀಯ ಎಂದು ಹಲ್ಲೆ ನಡೆಸಲಾಗಿದೆ.
ಹಲ್ಲೆ ನಡೆಸಿದ ಐವರ ವಿರುದ್ಧ ಶಿರಾಳಕೊಪ್ಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…