ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು
ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ.
ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.
ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಫೋಟದ ರಭಸಕ್ಕೆ ರೈಸ್ ಮಿಲ್ ಕಟ್ಟಡಕ್ಕೆ ಭಾರೀ ಪ್ರಮಾಣದ ಧಕ್ಕೆಯಾಗಿದೆ. ಕಟ್ಟಡದ ಕೆಲ ಭಾಗ ಕುಸಿದು ಬಿದ್ದಿದೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಪ್ರಮಾಣ ಎಷ್ಟೆಂಬುವುದು ಇನ್ನಷ್ಟೆ ತಿಳಿದುಬರಬೇಕಾಗಿದೆ.
ಬಾಯ್ಲರ್ ಸ್ಫೋಟದಿಂದ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಶಬ್ಧ ಕೇಳಿಬಂದಿತ್ತು. ಹಲವೆಡೆ ಮನೆಯ ಕಿಟಕಿ – ಬಾಗಿಲುಗಳು ಅಲುಗಾಡಿತ್ತು. ಇದು ನಾಗರೀಕರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಪೊಲೀಸರು, ಮೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿ – ಸಿಬ್ಬಂದಿಗಳ ತಂಡ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದವು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…