ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ
ರಿಪ್ಪನ್ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ.
ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ ಮೊದಲ ಪ್ರಯತ್ನದಲ್ಲಿಯೇ ಸಿ.ಎ ಪರೀಕ್ಷೆ ಉತ್ತೀರ್ಣರಾಗಿದ್ದಾರೆ.
ಸಿ.ಎ. ಆಗಬೇಕೆಂಬುದು ಹಲವಾರು ವಿದ್ಯಾರ್ಥಿಗಳ ಕನಸು. ಸಾಮಾನ್ಯ ಕೃಷಿ ಕುಟುಂಬದ ಈ ಛಲಗಾರ ತನ್ನ ಕನಸನ್ನು ನನಸು ಮಾಡುವಲ್ಲಿ ಸಫಲನಾಗಿದ್ದಾನೆ. ಇದರೊಂದಿಗೆ ಮನೆಯವರಿಗೆ, ಗುರುವೃಂದಕ್ಕೆ, ಸಮುದಾಯಕ್ಕೆ ಕೀರ್ತಿ ತಂದಿದ್ದಾನೆ.
ಮನು ಜೀವನ ಉಜ್ವಲ ಮತ್ತು ಯಶಸ್ವಿಯಾಗಲಿ ಎಂದು ಪಾಲಕರು, ಊರ ಹಿರಿಯರು ,ರಿಪ್ಪನ್ಪೇಟೆ ರಾಮಕೃಷ್ಣ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು,ಶಿವಮೊಗ್ಗ ನಂದನ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಮೊದಲ ಯತ್ನದಲ್ಲಿಯೇ ಸಿ ಎ ಪರೀಕ್ಷೆಯನ್ನು ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆತ್ಮೀಯ ಅಭಿನಂದನೆಗಳು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…
View Comments
ಅರಸಾಳು ಮೂರ್ತಿ ಆಚಾರ್ ರವರ ಮಗ ಮನು ಆಚಾರ್ ಅವರ ಸಾಧನೆ ಗೆ ಹ್ರುತ್ಪೂರ್ವಕ ಅಭಿನಂದನೆಗಳು
ಅವರಿಗೆ ಮುಂದಿನ ಜೀವನ ಯಾವಾಗಲೂ ಚನ್ನಾಗಿ ಇರಲಿ ಎಂದು ಹಾರೈಸುತ್ತೇವೆ
ಶಂಕರಾನಂದ ಜೋಯ್ಸ್ ಶಿವಮೊಗ್ಗ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನ