Breaking
12 Jan 2026, Mon

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು.

ಸಂಭ್ರಮಾಚರಣೆಯ ವೀಡಿಯೋ ವೀಕ್ಷಿಸಿ👆

ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು.

ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ. ಯುವಜನರು ಆಧುನಿಕ ಜೀವನದ ಭರಾಟೆಯಲ್ಲಿ ದಾರಿ ತಪ್ಪದೆ ಉತ್ತಮ ಜೀವನ ನಡೆಸುವಂತಾಗಲಿ ಎಂದು ಕರೆ ನೀಡಿದರು. ಪುಟ್ಟ ಮಕ್ಕಳು, ಯುವಕ, ಯುವತಿಯರು ಮಹಿಳೆಯರು, ಸಂತ ಕ್ಲಾಸ್ ವೇಶ ಧರಿಸಿ ನೃತ್ಯದ ಮೂಲಕ ಗಮನಸೆಳೆದರು. 

ಚರ್ಚ್‌ನಲ್ಲಿ ನಿರ್ಮಾಣ ಮಾಡಲಾದ ಕ್ರಿಸ್ಮಸ್ ಟ್ರೀ, ವಿವಿಧ ರೀತಿಯ ನಕ್ಷತ್ರಗಳು, ಯೇಸುವಿನ ಜನನ ಸಂದರ್ಭ ನೆನಪಿಸುವ ಗೋದಲಿ ದಾರಿ ಹೋಕರ ಗಮನ ಸೆಳೆದವು.

ಮಂಗಳವಾರ ಮಧ್ಯರಾತ್ರಿ ಹಾಗೂ ಬುಧವಾರ ಮುಂಜಾನೆ ಕ್ರೈಸ್ತ ಧರ್ಮದ ಪದ್ಧತಿಯಂತೆ ದೀಪಾಲಂಕಾರದೊಂದಿಗೆ ಯೇಸುವಿಗೆ ಕ್ರೈಸ್ತ ಧರ್ಮೀಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕ್ರಿಸ್ತನ ಜನನದ ಶುಭ ಗಳಿಗೆಯ ಸ್ಮರಣೆಯ ಸಂಕೇತವಾಗಿ ಶಾಂತಿ, ದೀನತೆಗಾಗಿ ಪ್ರಾರ್ಥನೆ ಸಲ್ಲಿಸಿ ಟದ ಭಕ್ತರು ಮೇಣದ ಬತ್ತಿಗಳನ್ನು ಬೆಳಗಿಸಿದರು.ಚರ್ಚ್‌ಗಳಲ್ಲಿ ಕೇಕ್, ಚಾಕೊಲೇಟ್, ಸಿಹಿ ತಿಂಡಿಗಳನ್ನು ವಿತರಿಸಿ ಸಂಭ್ರಮಿಸಿದರು.

ವಿನಾಯಕ ವೃತ್ತದಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ – ಪಟ್ಟಣದ ವಿನಾಯಕ ವೃತ್ತದಲ್ಲಿ ಕ್ರಿಶ್ಚಿಯನ್ ಬಾಂಧವರು ಸಾರ್ವಜನಿಕರೊಂದಿಗೆ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ವಿನಾಯಕ ವೃತ್ತದಲ್ಲಿ ಜಾತಿ ಮತ ಪಂಥಗಳ ಬೇಧವನ್ನು ಮರೆತು ಎಲ್ಲಾ ಧರ್ಮೀಯರು ಒಟ್ಟಾಗಿ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಮರಸ್ಯವನ್ನು‌ ಮೆರೆದರು.

ಈ ಸಂಧರ್ಭದಲ್ಲಿ ಹಿಂದೂ ಮಹಾಸಭಾ ಅಧ್ಯಕ್ಷ ರಾಮಚಂದ್ರ ಬಳೇಗಾರ್ ಕಾರ್ಯದರ್ಶಿ ಸುಧೀರ್ ಪಿ ,ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ ಬ್ಯಾರಿ , ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ದನಲಕ್ಷ್ಮಿ , ಕಲಾ ಕೌಸ್ತುಭ ಕನ್ನಡ ಸಂಘದ ರವೀಂದ್ರ ಕೆರೆಹಳ್ಳಿ , ಕ್ರೈಸ್ತ ಸಮುದಾಯದ ಮುಖಂಡರಾದ ವರ್ಗೀಸ್ ,ಸೆಬಾಸ್ಟಿಯನ್ , ವರ್ಗೀಸ್ ಬೆಟ್ಟಿನಕೆರೆ , ಗ್ರಾಪಂ ಸದಸ್ಯರಾದ ಆಸೀಫ಼್ , ಚಂದ್ರೇಶ್ , ನಿರೂಪ್ ಕುಮಾರ್ , ಅಶ್ವಿನಿ ರವಿಶಂಕರ್ , ನಿರುಪಮಾ ರಾಕೇಶ್ , ಸಾರಾಭಿ ಹೈದರ್ ,ಮತ್ತು ಶೈಲಾ ಪ್ರಭು ,ರಾಷ್ಟ್ರ ಪ್ರಶಸ್ತಿ ವಿಜೇತ ಬೋಜಪ್ಪ ಮಾಸ್ತರ್ , ಗುಡ್ ಶೆಪರ್ಡ್ ಯುವ ಒಕ್ಕೂಟದ ಪ್ರಮುಖರಾದ ರಾಬಿನ್ ,ಜಿತಿನ್ , ಶಾಂಟೋ ,ದಿನೂ , ಡಿವೈನ್ , ದೀಪೂ ,ಜೋಬಿ ಹಾಗೂ ದಿಲೀಪ್ ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *