ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ.

ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ.

ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಬೆಳಿಗ್ಗೆ ಪತಿ ಹಾಗೂ ಪತ್ನಿ ನಡುವೆ ಕಲಹ ಏರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿ, ಆರೋಪಿಯು ಚಾಕುವಿನಿಂದ ಪತ್ನಿಗೆ ಇರಿದು ಕೊ*ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಡಿವೈಎಸ್ಪಿ ಬಾಬು ಆಂಜನಪ್ಪ, ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಮೂಲತಃ  ಆನಂದಪುರದ ನಿವಾಸಿಯಾಗಿರುವ ರುಕ್ಸಾನಾಗೂ  ಪತಿಗೂ ಒಂದು ವಾರದ ಹಿಂದೆ  ಜಗಳವಾಗಿತ್ತು. ಇದೇ ಕಾರಣಕ್ಕೆ  ತನ್ನ ತವರುಮನೆಗೆ ಹೋಗಿದ್ದಳು.   ನಿನ್ನೆ  ಯೂಸುಫ್ ಮಗಳಿಗೆ ಹುಷಾರ್ ಇಲ್ಲ ಎಂದು ಹೇಳಿ ತನ್ನ ಪತ್ನಿಗೆ ಕರೆ ಮಾಡಿ ಬರುವಂತೆ ತಿಳಿಸಿದ್ದ. ಆದರೆ ಜಗಳದ ಹಿನ್ನೆಲೆಯಲ್ಲಿ ರುಕ್ಸಾನಾ ಮತ್ತವರ ಪೋಷಕರು ನೇರವಾಗಿ ಮಗಳನ್ನು ಅಡ್ಮಿಟ್ ಮಾಡಿರುವ ಆಸ್ಪತ್ರೆಗೆ ಬರುವುದಾಗಿ ಹೇಳಿದ್ದರು. ಇದಕ್ಕೆ ಯೂಸುಫ್, ಮಗಳನ್ನು ಡಿಸ್‌ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಹಾಗಾಗಿ ಅಣ್ಣನ ಮನೆಗೆ ಬರುವಂತೆ ತಿಳಿಸಿದ್ದ. ಆತನ ಮಾತಿನಂತೆ ರುಕ್ಸಾನಾ ಹಾಗೂ ಅವಳ ಪೋಷಕರು ಯೂಸುಫ್‌ನ ಅಣ್ಣನ ಮನೆಗೆ ನಿನ್ನೆ ಬಂದಿದ್ದರು. ಇವತ್ತು ಬೆಳಗ್ಗೆ ರುಕ್ಸಾನಾ ಜೊತೆ ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.

ಅಲ್ಲಿಗೆ ತೆರಳಿದ ೧೫ ನಿಮಿಷದಲ್ಲಿ ಆಕೆಯ ಜೊತೆಗೆ ಜಗಳ ತೆಗೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನುತ್ತದೆ ಪೊಲೀಸ್ ಮೂಲ.

ಆರೋಪಿ ಯೂಸುಫ್‌ನ ಸಹೋದರ ಹೇಳಿದೇನು..??

ಯೂಸುಫ್‌ನ ಸಹೋದರ ಇಸ್ಮಾಯಿಲ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿರುವ ಪ್ರಕಾರ, ರುಕ್ಸಾನ ತವರು ಮನೆಗೆ ಹೋಗಿದ್ದಳು. ಇವತ್ತು ಆಕೆಯನ್ನ ತನ್ನ ಮನೆಗೆ ಕರೆದುಕೊಂಡು ಹೋದ ಯೂಸುಫ್ ಅವಳನ್ನ ಕೊಲೆ ಮಾಡಿದ್ದಾನೆ. ಇದಕ್ಕೆ ಆಕೆ ಇನ್ನೊಬ್ಬರ ಜೊತೆ ಸಂಬಂಧ ಇದೆ ಎಂಬ ಅನುಮಾನ ಕಾರಣ ಎಂಬುದು ಇಸ್ಮಾಯಿಲ್‌ರವರ ಆರೋಪ.
ರುಕ್ಸಾನಳಿಗೆ ಅಕ್ರಮ ಸಂಬಂಧ ಇದೆ ಎಂಬ ಅನುಮಾನ ಹೊಂದಿದ್ದ ಯೂಸುಫ್ ಅದಕ್ಕೆ ಸಂಬಂಧಿಸಿದಂತೆ ಮೊಬೈಲ್ ಕರೆಗಳ ಸಾಕ್ಷ್ಯ ತೋರಿಸಿ ಜಗಳವಾಡಿದ್ದ. ಇದೇ ಕಾರಣಕ್ಕೆ ಆಕೆಯನ್ನು ತವರಿಗೆ ಕಳುಹಿಸಿದ್ದ ಯೂಸುಫ್ ಇವತ್ತು ತನ್ನ ಮನೆಗೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾನೆ. ಬಳಿಕ ರುಕ್ಸಾನಾರ ಸಂಬಂಧಿಕರಿಗೆ ತಿಳಿಸಿದ್ದರಿಂದ ಘಟನೆ ಬಯಲಿಗೆ ಬಂದಿದೆ ಎನ್ನುತ್ತಾರೆ ಇಸ್ಮಾಯಲ್.

ಘಟನೆ ಬಗ್ಗೆ ಸ್ಥಳೀಯರು ಹೇಳಿದ್ದೇನು..???

ಸ್ಥಳೀಯರು ರುಕ್ಸಾನಾ ಒಳ್ಳೆಯ ಗೃಹಿಣಿಯಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಕುಟುಂಬಸ್ಥರಲ್ಲಿಯು ರುಕ್ಸಾನಾ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಜಗಳದ ವಿಚಾರದಲ್ಲಿ ಮಾತುಕತೆಗಳು ನಡೆದಿದ್ದವು ಎನ್ನಲಾಗುತ್ತೆ. ರುಕ್ಸಾನಾ ಸಂಬಂಧಿಕರು ಸಹ ಯೂಸುಫ್ ಕಡೆಯವರ ಆರೋಪವನ್ನು ಅಲ್ಲಗಳೆದಿದ್ದಾರೆ.

ಈ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಯೂಸುಫ್‌ನನ್ನ ವಶಕ್ಕೆ ಪಡೆದು, ಪ್ರಕರಣದ ಕಾನೂನು ಪ್ರಕ್ರಿಯೆಗಳನ್ನ ನಡೆಸ್ತಿದ್ದಾರೆ. ಅಲ್ಲದೆ ಇಡೀ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದಾರೆ. ಒಟ್ಟಾರೆ ೩೮ ವರ್ಷದ ರುಕ್ಸಾನ ಹಾಗೂ ಯೂಸುಫ್‌ನ ನಡುವೆ ಮೂಡಿದ ಸಂಶಯದಿಂದಾಗಿ ರುಕ್ಸಾನ ಸಾವನ್ನಪ್ಪಿದ್ದಾಳೆ. ಎಸಿ ಮೆಕಾನಿಕ್ ಆಗಿ ಇಲ್ಲಿವರೆಗೂ ಸುಂದರ ಸಂಸಾರ ನಡೆಸಿದ್ದ ಯೂಸುಫ್ ಪೊಲೀಸ್ ವಶದಲ್ಲಿದ್ದಾನೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

19 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

19 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

20 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 days ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 days ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 days ago