ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ
ರಿಪ್ಪನ್ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು.
ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ ಮಂಜೂರಾಗಿದ್ದು ಈ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಶಂಕುಸ್ಥಾಪನೆ ನೆರವೇರಿಸಿದರು.
ಈ ಭಾಗದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೂವಮ್ಮ ಸದಸ್ಯರಾದ ಮಹಮ್ಮದ್ ಷರೀಫ್ , ಪುಟ್ಟಮ್ಮ,ಕೃಷ್ಣೋಜಿರಾವ್, ರಮ್ಯ , ಪರಮೇಶ್ವರಪ್ಪ, ಉಷಾ, ಗೌರಮ್ಮ ಪಿಡಿಒ ರವಿಕುಮಾರ್ ಕಿರಿಯ ಇಂಜಿನಿಯರ್ ಕೊಟ್ರೇಶ್ , ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುನಿಲ್ ಕುಮಾರ್ ಹಾಗೂ ಗುತ್ತಿಗೆದಾರರ ಪವನ್ ಕುಮಾರ್ ಹಾಜರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…