IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ

ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ.

ಒಂದು ಹಂತದಲ್ಲಿ ಭಾರತ 250 ರನ್ ಗಳೊಳಗೆ ಆಲೌಟ್ ಆಗುವ ಭೀತಿಯಿತ್ತು. ಆದರೆ ನಿತೀಶ್ ಕುಮಾರ್ ರೆಡ್ಡಿ ಸಂಕಷ್ಟದ ಸಮಯದಲ್ಲಿ ಮತ್ತೊಮ್ಮೆ ಭಾರತದ(india) ಪಾಲಿಗೆ ಆಪತ್ ಬಾಂಧವರಾದರು. ಕೆಳ ಕ್ರಮಾಂಕದಲ್ಲಿ ಅದೂ ತಂಡ ಸಂಕಷ್ಟದಲ್ಲಿರುವಾಗ ಬ್ಯಾಟಿಂಗ್ ಬಂದು ಶತಕ ಸಿಡಿಸಿ ಎಲ್ಲರೂ ಹೆಮ್ಮೆಯಿಂದ ಚಪ್ಪಾಳೆ ತಟ್ಟುವಂತೆ ಮಾಡಿದರು.

ನಿತೀಶ್ 85 ರನ್ ಗಳಿಸಿದ್ದಾಗ ಭಾರತ 7 ವಿಕೆಟ್ ಕಳೆದುಕೊಂಡಿತ್ತು. ಆಗ ಮಳೆ ಬಂದಿದ್ದರಿಂದ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಇದಾಗಿ ಪಂದ್ಯ ಶುರುವಾದ ಮೇಲೆ 50 ರನ್ ಗಳಿಸಿ ವಾಷಿಂಘ್ಟನ್ ಸುಂದರ್(Washington Sundar) ವಿಕೆಟ್ ಒಪ್ಪಿಸಿದರು. ಆಗ ನಿತೀಶ್ ಎದೆಯಲ್ಲಿ ಢವ ಢವ ಶುರುವಾಗಿತ್ತು.

ವಿಪರ್ಯಾಸವೆಂದರೆ ನಂತರ ಬಂದ ಬುಮ್ರಾ(bumrah) ಕೂಡಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ವೇಳೆ ನಿತೀಶ್ 99 ರನ್ ಗಳಿಸಿ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದರು. ಮೊಹಮ್ಮದ್ ಸಿರಾಜ್ ಬ್ಯಾಟಿಂಗ್ ಗೆ ಬಂದಿದ್ದರು. ಪ್ಯಾಟ್ ಕಮಿನ್ಸ್ (Cummins) ಬೆಂಕಿ ಚೆಂಡು ಎಸೆಯುತ್ತಿದ್ದರು. ಸಿರಾಜ್ ಮೂರು ಬಾಲ್ ಎದುರಿಸಬೇಕಿತ್ತು. ಭಾರತೀಯ ಡ್ರೆಸ್ಸಿಂಗ್ ರೂಂ, ನಿತೀಶ್ ಕುಮಾರ್ ರೆಡ್ಡಿ, ಕಾಮೆಂಟೇಟರ್ಸ್, ಮೈದಾನದಲ್ಲಿದ್ದ ಪ್ರೇಕ್ಷಕರು ಮತ್ತು ಟಿವಿ ವೀಕ್ಷಿಸುತ್ತಿದ್ದ ಕೋಟ್ಯಾಂತರ ವೀಕ್ಷಕರ ಎದೆಯಲ್ಲಿ ಆಗಲೇ ಲಬ್ ಡಬ್ ಶುರುವಾಗಿತ್ತು.

ಅದೃಷ್ಟವಶಾತ್ ಸಿರಾಜ್(Siraj) ಆ ಮೂರೂ ಎಸೆತಗಳನ್ನು ಡಿಫೆಂಡ್ ಮಾಡುವಲ್ಲಿ ಯಶಸ್ವಿಯಾದರು. ಓವರ್ ಮುಗಿದಾಗ ಸಿರಾಜ್ ಅರ್ಧಶತಕ ಗಳಿಸಿದವರಂತೆ ನಿಟ್ಟುಸಿರು ಬಿಟ್ಟರು. ಮುಂದಿನ ಓವರ್ ನಲ್ಲಿ ನಿತೀಶ್ ಗೆ ಸ್ಟ್ರೈಕ್ ಸಿಕ್ಕಿತ್ತು.

ಮೊದಲ ಎರಡು ಎಸೆತವನ್ನು ಡಿಫೆಂಡ್ ಮಾಡಿದ ಅವರು ನಂತರದ ಎಸೆತದಲ್ಲಿ ಬೌಂಡರಿ ಗಳಿಸುವ ಮೂಲಕ ಚೊಚ್ಚಲ ಶತಕ ಗಳಿಸಿಯೇ ಬಿಟ್ಟರು.

ಮೈದಾನದಲ್ಲಿದ್ದ ಅವರ ತಂದೆಯ ಖುಷಿಯಿಂದ ಕಣ್ಣೀರು ಹಾಕಿದರು. ಸ್ವತಃ ನಿತೀಶ್ ಭಾವುಕರಾಗಿದ್ದು ಕಂಡುಬಂತು. ಜೊತೆಗೆ ಇಡೀ ಮೈದಾನದೇ ಖುಷಿಯಿಂದ ಹುಚ್ಚೆದ್ದು ಕುಣಿಯಿತು. ಇಂತಹದ್ದೊಂದು ಭಾವನಾತ್ಮಕ ಸನ್ನಿವೇಶದೊಂದಿಗೆ ಎಂದೆಂದಿಗೂ ನೆನಪಿನಲ್ಲುಳಿಯುವಂತಹ ಶತಕವನ್ನು ನಿತೀಶ್ ಪೂರ್ತಿ ಮಾಡಿಯೇ ಬಿಟ್ಟಿದ್ದರು.

ಇದೀಗ ಭಾರತ 9 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿದ್ದು, ಇನಿಂಗ್ಸ್ ಹಿನ್ನಡೆಯನ್ನು 116 ರನ್ ಗೆ ಬಂದು ನಿಂತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago