Breaking
12 Jan 2026, Mon

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ

ಹೊಸನಗರ : ಇಲ್ಲಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ  ಕೃಷಿ  ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ ಜಿ ನಾಗರಾಜ್ 10 ಮತಗಳ ಅಂತರದಿಂದ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಸಾಲಗಾರ ರಲ್ಲದ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಬಿ ಜಿ ನಾಗರಾಜ್ 164 ಮತಗಳನ್ನು ಪಡೆದರೆ ಎದುರು ಸ್ಪರ್ಧಿ ಶ್ರೀನಿವಾಸ ಹೆಚ್ 174 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಇನ್ನೂ ಸಾಲಗಾರರ ಕ್ಷೇತ್ರದಲ್ಲಿ ರವಿ ಜಿ ಎಸ್ 239 ಮತಗಳನ್ನು ಪಡೆದರೆ ವಿನಯ್ ಕುಮಾರ ಡಿ ಆರ್  244 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಇಂದಿನ ಕಳೂರು ರಾಮೇಶ್ವರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಅನ್ನು ಹಾಲಿ ಅಧ್ಯಕ್ಷ ದುಮ್ಮಾ ವಿನಯ್ ಗೌಡ ಮಾಡಿದ್ದಾರೆ.

ಸಾಲಗಾರ ರಲ್ಲದ ಕ್ಷೇತ್ರದ ಅಭ್ಯರ್ಥಿಗಳು ಪಡೆದ ಮತಗಳು

1). ನಾಗರಾಜ ಬಿ.ಜಿ 164 ಮತಗಳು
2). ವಿಶ್ವೇಶ್ವರಯ್ಯ 07 ಮತಗಳು
3). ಶ್ರೀನಿವಾಸ ಹೆಚ್ 174 ಮತಗಳು – ಗೆಲುವು

ಸಾಲಗಾರ ಕ್ಷೇತ್ರದ ಅಭ್ಯರ್ಥಿಗಳು ಪಡೆದ ಮತಗಳು

1). ಈಶ್ವರಪ್ಪ ಕೆ ಆರ್ 66 ಮತಗಳು
2). ರವಿ ಜಿ ಎಸ್ 239 ಮತಗಳು
3). ವಿನಯ್ ಕುಮಾರ ಡಿ ಆರ್ 244 ಮತಗಳು – ಗೆಲುವು

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *