HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ
HOSANAGARA | ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಪ್ರಾಂಶುಪಾಲ ಡಾ ಕೆ ಉಮೇಶ್ ಅಧ್ಯಕ್ಷತೆಯಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನಡೆಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ ಎಂ ಗೀತಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ ಕುಮಾರಿ ಎನ್ ಆರ್ ಕಲಾವತಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಂಜುನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಇಲಾಖೆ ಗಳು ನೀಡುವ ವಿದ್ಯಾರ್ಥಿ ವೇತನ ಇತರ ಸೌಲಭ್ಯಗಳ ಬಗ್ಗೆ ತಾಂತ್ರಿ ಕಾಂಶ ವಿವರಣೆ ನೀಡಿ ಈ ಸೌಲಭ್ಯಗಳನ್ನು ಪಡೆದು ಕಾಲೇಜು ನೀಡುವ ಉತ್ತಮ ಶಿಕ್ಷಣ ಸೌಲಭ್ಯದಿಂದ ಉತ್ತಮ ನಾಗರಿಕರಾಗಿ ಗುರುತಿಸಿಕೊಳ್ಳುವಂತೆ ಕರೆ ನೀಡಿದರು.
ಈ ಕಾರ್ಯಗಾರದಲ್ಲಿ ಕಾಲೇಜಿನ ಐಕ್ಯೂಎಸಿ ವಿಭಾಗದ ಸಂಚಾಲಕ ಡಿ ಮಂಜುನಾಥ್ ಯೂತ್ರೆಡ್ ಕ್ರಾಸ್ ಸಂಚಾಲಕ ಹೆಚ್ ದೊಡ್ಡಯ್ಯ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಕೆ ಎಸ್ ಮೇದಿನಿ ಎಸ್ಸಿ ಎಸ್ಟಿ ಓಬಿಸಿ ಘಟಕದ ಸಂಚಾಲಕ ಜಯ ರವಿಕುಮಾರ್ ಮೊದಲಾದ ಇನ್ನೂವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮೇದಿನಿ ಸ್ವಾಗತಿಸಿದರು ರವಿ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು ಸಹಾಯಕ ಪ್ರೊಫೆಸರ್ ಎನ್ ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು ಹೆಚ್ ದೊಡ್ಡಯ್ಯ ಅಭಾರ ಮನ್ನಿಸಿದರು
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…