ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು
ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ ಮಂಗಳೂರಿನ ಹಳ್ಳಿಯೊಂದರಲ್ಲಿ ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ.
“ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಬ್ಯಾನರ್ ಫೋಟೋ ಇದೀಗ ಸಖತ್ ವೈರಲ್ ಆಗಿದೆ.
ಇಲ್ಲಿ ಕಸ ಹಾಕಬಾರದು ಎಂಬ ಎಚ್ಚರಿಕೆಯ ಫಲಕ ಅಳವಡಿಸಿದರು ಕೂಡಾ ಕೆಲ ಜನ ಆ ಜಗದಲ್ಲಿಯೇ ಕಸವನ್ನು ಹಾಕಿ ಪರಿಸರದ ಸ್ವಚ್ಛತೆಯನ್ನು ಮತ್ತು ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ. ಕಸ ಎಸೆಯಬೇಡಿ ಎಂದು ಎಷ್ಟೇ ಹೇಳಿದರೂ ಮಾತು ಕೇಳದ ಜನರಿಗೆ ತಕ್ಕ ಪಾಠವನ್ನು ಕಲಿಸಬೇಕೆಂದು ಇಲ್ಲೊಂದು ಊರಿನ ಜನ “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ.
ಇದನ್ನು ಓದಿಯಾದರೂ ಕಸ ಹಾಕುವವರು ನಿಲ್ಲಿಸಬಹುದೆ?
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…