ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು
ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ ಮಂಗಳೂರಿನ ಹಳ್ಳಿಯೊಂದರಲ್ಲಿ ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ.
“ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಬ್ಯಾನರ್ ಫೋಟೋ ಇದೀಗ ಸಖತ್ ವೈರಲ್ ಆಗಿದೆ.
ಇಲ್ಲಿ ಕಸ ಹಾಕಬಾರದು ಎಂಬ ಎಚ್ಚರಿಕೆಯ ಫಲಕ ಅಳವಡಿಸಿದರು ಕೂಡಾ ಕೆಲ ಜನ ಆ ಜಗದಲ್ಲಿಯೇ ಕಸವನ್ನು ಹಾಕಿ ಪರಿಸರದ ಸ್ವಚ್ಛತೆಯನ್ನು ಮತ್ತು ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ. ಕಸ ಎಸೆಯಬೇಡಿ ಎಂದು ಎಷ್ಟೇ ಹೇಳಿದರೂ ಮಾತು ಕೇಳದ ಜನರಿಗೆ ತಕ್ಕ ಪಾಠವನ್ನು ಕಲಿಸಬೇಕೆಂದು ಇಲ್ಲೊಂದು ಊರಿನ ಜನ “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ.
ಇದನ್ನು ಓದಿಯಾದರೂ ಕಸ ಹಾಕುವವರು ನಿಲ್ಲಿಸಬಹುದೆ?
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…