ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ
ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ.
ಡಿಸೆಂಬರ್ 23ರಂದು ರೈಲಿನಲ್ಲಿ ಮಾಂಗಲ್ಯ ಸರ ಕಳ್ಳತನ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಮತ್ತಷ್ಟು ಮುಂಜಾಗ್ರತೆ ವಹಿಸಿದ್ದರು. ಆನಂದಪುರ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ವಿಚಾರಣೆ ತೀವ್ರಗೊಳಿಸಿದಾಗ ಮಾಂಗಲ್ಯ ಸರ ಕಳ್ಳತನ ಮಾಡಿದ್ದನ್ನು ಬಾಯಿಬಿಟ್ಟಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ 72 ಗಂಟೆಯಲ್ಲಿ ಆರೋಪಿಯನ್ನ ಪತ್ತೆಹಚ್ಚಿದ ಆರ್ ಪಿ ಎಫ್ ಇನ್ ಸ್ಪೆಕ್ಟರ್ ಆದ ಬಿ.ಕೆ.ಪ್ರಕಾಶ್ ಮತ್ತು ತಂಡಕ್ಕೆ ಐಜಿ ಗೌರವಿಸಿ ಅಭಿನಙದಿಸಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…