ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ
ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ ಮನೆಗೆ ಬಿಟ್ಟು ಬರುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ಹೊಸ ವರ್ಷದ ಪಾರ್ಟಿ ಆಯೋಜನೆ ಮಾಡುವ ಹೋಟೆಲ್ಸ್, ಲಾಡ್ಜ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಭಾನುವಾರ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದಲ್ಲಿ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ಹೊಸ ವರ್ಷದ ಪಾರ್ಟಿ ಆಯೋಜನೆ ಮಾಡುವ ಎಲ್ಲರೂ ಪಾರ್ಟಿ ವೇಳೆ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ವಿಶೇಷ ನಿಗಾವಹಿಸಬೇಕು. ಪಾರ್ಟಿಗಳ ಆಯೋಜನೆ ಕುರಿತು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆದುಕೊಳ್ಳಬೇಕು ಎಂದು ಹೋಮ್ ಸ್ಟೇ, ಹೋಟೆಲ್ ಮತ್ತು ಲಾಡ್ಜ್ಗಳ ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಹೊಸ ವರ್ಷಕ್ಕೆ ಸಾರ್ವಜನಿಕರ ಹಿತದೃಷ್ಟಿಯಿಂದ ಸಂಭ್ರಮಾಚರಣೆಗೆ ಪೊಲೀಸ್ ಇಲಾಖೆಯ ಕೆಲವೊಂದು ಷರತ್ತುಗಳನ್ನು ಪಾಲನೆ ಮಾಡಬೇಕು. ಮುಖ್ಯವಾಗಿ ಸ್ಥಳೀಯ ಪೊಲೀಸ್ ಠಾಣೆಗಳ ಅನುಮತಿ ಇಲ್ಲದೆಯೇ ಪಾರ್ಟಿಗಳನ್ನು ಆಯೋಜಿಸುವಂತಿಲ್ಲ. ನಿಮ್ಮ ಸಾಮರ್ಥ್ಯ ಮೀರಿ ಬುಕಿಂಗ್ ಮಾಡಿಕೊಳ್ಳಬಾರದು. ಮದ್ಯದ ಅಮಲಿನಲ್ಲಿ ಸಾಕಷ್ಟು ಅಪಘಾತ, ಅನಾಹುತಗಳು ಸಂಭವಿಸುವ ಕಾರಣದಿಂದ ಅಬಕಾರಿ ಇಲಾಖೆ ನಿಯಮನುಸಾರ ಮದ್ಯ ಪೂರೈಕೆ ಮಾಡಬೇಕು. ಯಾವುದೇ ಗಲಾಟೆಗಳಿಗೆ ಅವಕಾಶವಿಲ್ಲದಂತೆ ಹೊಸ ವರ್ಷವನ್ನು ಬರಮಾಡಿ ಕೊಳ್ಳಬೇಕು ಎಂದು ತಿಳಿಸಿದರು.
ಹೊಸ ವರ್ಷದ ದಿನದಂದು ಡಿ.31ರ ಮಧ್ಯರಾತ್ರಿ 1ರವರೆಗೆ ಸಾರ್ವಜನಿಕವಾಗಿ ಸಂಭ್ರಮಾಚರಣೆಗೆ ಅವಕಾಶ ನೀಡಲಾಗುವುದು. ಅತಿ ವೇಗದಿಂದ ವಾಹನಗಳ ಚಾಲನೆ ಮಾಡಬಾರದು. ಜೊತೆಗೆ, ಕುಡಿದು ವಾಹನ ಓಡಿಸಬಾರದು. ಪಾರ್ಟಿಗಳನ್ನು ತಮ್ಮ ಜಾಗದಲ್ಲಿ ಆಯೋಜನೆ ಮಾಡಿಕೊಳ್ಳಬೇಕು. ಮಧ್ಯರಾತ್ರಿ 1 ಗಂಟೆಯ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪಾರ್ಟಿಗೆ ಬರುವವರನ್ನು ರಾತ್ರಿ ಆದಷ್ಟು ಅಲ್ಲಿಯೇ ಉಳಿದುಕೊಳ್ಳುವ ವ್ಯವಸ್ಥೆ ಮಾಡಬೇಕು. ಅಥವಾ ಕುಡಿದು ಮನೆಗೆ ಹೋಗುವವರಿಗೆ ಮನೆವರೆಗೆ ಬಿಟ್ಟು ಬರುವುದಕ್ಕೆ ಚಾಲಕರನ್ನು ನಿಯೋಜಿಸಿಕೊಳ್ಳಬೇಕು. ಒಂದು ವೇಳೆ ಏನಾದರೂ ಅನಾಹುತ ಆದರೆ ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದರು.
ಇನ್ನು ಸಭೆಯಲ್ಲಿ ಎಎಸ್ಪಿಗಳಾದ ಅನಿಲ್ಕುಮಾರ್ ಭೂಮರಡ್ಡಿ ಹಾಗೂ ಎ.ಜಿ.ಕಾರಿಯಪ್ಪ ಉಪಸ್ಥಿತರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…