NSUI ವತಿಯಿಂದ ಅಮಿತ್ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಬಿ.ಆರ್.ಅಂಬೇಡ್ಕರ್ ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್ ಶಾ ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನಕುಮಾರ್ ಹೇಳಿದರು.
ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂದು ಹೇಳುವುದು ಈಗ ಶೋಕಿ ಆಗಿಬಿಟ್ಟಿದೆ. ಇಷ್ಟೊಂದು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮಗಳವರೆಗೆ ಸ್ವರ್ಗ ಪ್ರಾಪ್ತಿ ಆಗುತ್ತಿತ್ತು’ ಎಂದು ಅಮಿತ್ ಶಾ ಮತಿಕೆಟ್ಟವರಂತೆ ಮಾತನಾಡಿದ್ದಾರೆ ಇದು ಅಕ್ಷಮ್ಯ ಎಂದರು.
ದಾಸ್ಯ, ದೌರ್ಜನ್ಯ, ಶೋಷಣೆಯಲ್ಲೇ ಇದ್ದ ಕೋಟ್ಯಂತರ ಭಾರತೀಯರು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದಾಗಿ ಇಂದು ಸ್ವಾಭಿಮಾನದಿಂದ ಬದುಕುವಂತಾಗಿದೆ. ಈ ದೇಶದ ಇತಿಹಾಸ, ಬಲಿದಾನ ಮಾಡಿದ ನಾಯಕರ ಬಗ್ಗೆ ಅರಿವಿಲ್ಲದೇ ಇರುವಂತಹ ಅಯೋಗ್ಯ ವ್ಯಕ್ತಿ ಅಮಿತ್ ಶಾ ಒಂದು ಕ್ಷಣವೂ ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು. ರಾಷ್ಟ್ರಪತಿಗಳು ಕೂಡಲೇ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು HC ಯೋಗೇಶ್ ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ಸಚಿವ ಸ್ಥಾನದಲ್ಲಿ ಮುಂದುವರೆದಲ್ಲಿ ಎನ್.ಎಸ್ಯು.ಐ. ದೇಶಾದ್ಯಂತ ತೀವ್ರ ಹೋರಾಟ ಮಾಡಲಿದೆ ಎಂದು ಈ ಮೂಲಕ NSUI ಸಂಘಟನೆ ಜಿಲ್ಲಾಧ್ಯಕ್ಷ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್, ಖಲೀಮ್ ಪಾಷ, ರಮೇಶ್ ಹೆಗಡೆ, ವಿಶ್ವನಾಥ್ ಕಾಶಿ, ಚೇತನ್, ಮಧುಸುಧನ್, ಅಕ್ಬರ್, NSUI ತಾಲೂಕು ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಅಬ್ದುಲ್, ಗೌತಮ್, ಮಲಗುಪ್ಪ ಶಿವು,
ಕಾರ್ಯಕರ್ತರು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…