ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ.
ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ ನಿಮ್ಮನ್ನು ಸಾಕಿ ಸಲುಹಿದ ಪೋಷಕರು ಕಣ್ಣಿರು ಹಾಕುವುದನ್ನು ತಪ್ಪಿಸುವುದಕ್ಕಾದರು ನಿಧಾನವಾಗಿ ಚಲಾಯಿಸಿ. ಜೀವಕ್ಕಿಂತ ಯಾವುದೂ ಮುಖ್ಯವಲ್ಲವೆಂಬುದು ನಿಮಗೆ ಅರಿವಿರಲಿ.
ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು ಅಧೋಗತಿಗೆ ಇಳಿಸುವಂತಹ ಪರಿಸ್ಥಿತಿಗೆ ಬಂದಿದೆ,ದಯವಿಟ್ಟು ಅದರಿಂದ ದೂರ ಉಳಿದು ಸಮಾಜದ ಶ್ರೇಯಸ್ಸಲ್ಲಿ ಪಾಲ್ಗೊಂಡು ಉತ್ತಮ ನಾಗರೀಕರಾಗಿ ಬದುಕಿ.
ಅಂಕಿ ಅಂಶಗಳ ಅಂದಾಜಿನ ಪ್ರಕಾರ ಇತ್ತೀಚಿನ ದಿನಗಳಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವವರು ಬಹುಪಾಲು ಸಂಖ್ಯೆಯಲ್ಲಿ ಯುವಕರೇ ಆಗಿದ್ದಾರೆ. ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿರುವವರಲ್ಲಿ ಹೆಚ್ಟಿನವರು 18 ರಿಂದ 30 ವರ್ಷದೊಳಗಿನವರಾಗಿದ್ದಾರೆ. ಕೆಲವು ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳ ಒತ್ತಾಯಕ್ಕೆ ಕಟ್ಟುಬಿದ್ದು ವಾಹನಗಳನ್ನು ಚಲಾಯಿಸಲು ಕೊಟ್ಟು ತಪ್ಪುಮಾಡುತ್ತಿದ್ದಾರೆ. ಇವರು ತಾವು ಬಲಿಯಾಗುವುದಲ್ಲದೆ ಬೇರೆಯವರನ್ನೂ ಬಲಿ ತೆಗೆದುಕೊಳ್ಳುತ್ತಿದ್ದಾರೆ.
ಹೆಚ್ಚಿನ ರಸ್ತೆ ಅಪಘಾತಗಳಲ್ಲಿ ತಮ್ಮ ತಪ್ಪಿಲ್ಲದಿದ್ದರೂ ಬೇರೆ ಯಾರೋ ಮಾಡಿದ ತಪ್ಪಿಗೆ ಅಮಾಯಕ ಮುಗ್ಧ ಜೀವಗಳು ಬಲಿಯಾಗುತ್ತಿವೆ. ನಶೆಯಲ್ಲಿ ತೇಲಾಡುವವರಿಗೆ ತಾನು ರಸ್ತೆಯ ಮೇಲೆ ಸಂಚರಿಸುತ್ತಿಲ್ಲ ಆಕಾಶದಲ್ಲಿ ತೇಲಾಡುತ್ತಿದ್ದೆನೆಂಬ ಭ್ರಮೆ ಇರುವುದರಿಂದಲೇ ಸಾಕಷ್ಟು ಅಪಘಾತಗಳು ಸಂಭವಿಸುತ್ತವೆ.ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸದಿದ್ದಲ್ಲಿ ಏನೆಲ್ಲಾ ಅನಾಹುತಗಳು ಜರುಗಬಹುದು ಎಂಬುದನ್ನು ನಾವೆಲ್ಲಾ ಪ್ರತಿನಿತ್ಯ ಮಾಧ್ಯಮಗಳಲ್ಲಿ ವೀಕ್ಷಿಸುತ್ತಿದ್ದೇವೆ. ಆದರೆ ಪಾಲಿಸುತ್ತೇವೆಯೇ? ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಹೇಳಿಕೆಗಳು ಲಂಚದ ಮುಂದೆ ಬಲಕಳೆದುಕೊಳ್ಳುತ್ತದೆ.
ಪ್ರತಿ ಹೊಸ ವರ್ಷದ ಸಮಯದಲ್ಲಿ ಅನಾಹುತಗಳು ನಡೆಯುವುದನ್ನು ಹಲವಾರು ವರ್ಷಗಳಿಂದ ನೋಡುತಿದ್ದೇವೆ. ದಯವಿಟ್ಟು ನಿಧಾನವಾಗಿ ಸುರಕ್ಷಿತವಾಗಿ ವಾಹನ ಚಲಾಯಿಸಿ ಏಕೆಂದರೆ ಸಮಾಜಕ್ಕೆ ನಿಮ್ಮ ಸಾವು ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ…..
ದಯವಿಟ್ಟು ಆಲೋಚಿಸಿ ವಾಹನ ಚಲಾಯಿಸುವಂತೆ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ……
– ರಫ಼ಿ ರಿಪ್ಪನ್ಪೇಟೆ
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…