ಹೊಸ ವರ್ಷ ಸಂಭ್ರಮಾಚರಣೆಯ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ

ನಿಮ್ಮ ಸಾವು ಸಮಾಜಕ್ಕೆ ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ…..

ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ.

ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ ನಿಮ್ಮನ್ನು ಸಾಕಿ ಸಲುಹಿದ ಪೋಷಕರು ಕಣ್ಣಿರು ಹಾಕುವುದನ್ನು ತಪ್ಪಿಸುವುದಕ್ಕಾದರು ನಿಧಾನವಾಗಿ ಚಲಾಯಿಸಿ. ಜೀವಕ್ಕಿಂತ ಯಾವುದೂ ಮುಖ್ಯವಲ್ಲವೆಂಬುದು ನಿಮಗೆ ಅರಿವಿರಲಿ.

ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು ಅಧೋಗತಿಗೆ ಇಳಿಸುವಂತಹ ಪರಿಸ್ಥಿತಿಗೆ ಬಂದಿದೆ,ದಯವಿಟ್ಟು ಅದರಿಂದ ದೂರ ಉಳಿದು ಸಮಾಜದ ಶ್ರೇಯಸ್ಸಲ್ಲಿ ಪಾಲ್ಗೊಂಡು ಉತ್ತಮ ನಾಗರೀಕರಾಗಿ ಬದುಕಿ.

ಅಂಕಿ ಅಂಶಗಳ ಅಂದಾಜಿನ ಪ್ರಕಾರ ಇತ್ತೀಚಿನ ದಿನಗಳಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವವರು ಬಹುಪಾಲು ಸಂಖ್ಯೆಯಲ್ಲಿ ಯುವಕರೇ ಆಗಿದ್ದಾರೆ. ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿರುವವರಲ್ಲಿ ಹೆಚ್ಟಿನವರು 18 ರಿಂದ 30 ವರ್ಷದೊಳಗಿನವರಾಗಿದ್ದಾರೆ. ಕೆಲವು ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳ ಒತ್ತಾಯಕ್ಕೆ ಕಟ್ಟುಬಿದ್ದು ವಾಹನಗಳನ್ನು ಚಲಾಯಿಸಲು ಕೊಟ್ಟು ತಪ್ಪುಮಾಡುತ್ತಿದ್ದಾರೆ. ಇವರು ತಾವು ಬಲಿಯಾಗುವುದಲ್ಲದೆ ಬೇರೆಯವರನ್ನೂ ಬಲಿ ತೆಗೆದುಕೊಳ್ಳುತ್ತಿದ್ದಾರೆ.

ಹೆಚ್ಚಿನ ರಸ್ತೆ ಅಪಘಾತಗಳಲ್ಲಿ ತಮ್ಮ ತಪ್ಪಿಲ್ಲದಿದ್ದರೂ ಬೇರೆ ಯಾರೋ ಮಾಡಿದ ತಪ್ಪಿಗೆ ಅಮಾಯಕ ಮುಗ್ಧ ಜೀವಗಳು ಬಲಿಯಾಗುತ್ತಿವೆ. ನಶೆಯಲ್ಲಿ ತೇಲಾಡುವವರಿಗೆ ತಾನು ರಸ್ತೆಯ ಮೇಲೆ ಸಂಚರಿಸುತ್ತಿಲ್ಲ ಆಕಾಶದಲ್ಲಿ ತೇಲಾಡುತ್ತಿದ್ದೆನೆಂಬ ಭ್ರಮೆ ಇರುವುದರಿಂದಲೇ ಸಾಕಷ್ಟು ಅಪಘಾತಗಳು ಸಂಭವಿಸುತ್ತವೆ.ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸದಿದ್ದಲ್ಲಿ ಏನೆಲ್ಲಾ ಅನಾಹುತಗಳು ಜರುಗಬಹುದು ಎಂಬುದನ್ನು ನಾವೆಲ್ಲಾ ಪ್ರತಿನಿತ್ಯ ಮಾಧ್ಯಮಗಳಲ್ಲಿ ವೀಕ್ಷಿಸುತ್ತಿದ್ದೇವೆ. ಆದರೆ ಪಾಲಿಸುತ್ತೇವೆಯೇ? ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಹೇಳಿಕೆಗಳು ಲಂಚದ ಮುಂದೆ ಬಲಕಳೆದುಕೊಳ್ಳುತ್ತದೆ.

ಪ್ರತಿ ಹೊಸ ವರ್ಷದ ಸಮಯದಲ್ಲಿ ಅನಾಹುತಗಳು ನಡೆಯುವುದನ್ನು ಹಲವಾರು ವರ್ಷಗಳಿಂದ ನೋಡುತಿದ್ದೇವೆ. ದಯವಿಟ್ಟು ನಿಧಾನವಾಗಿ ಸುರಕ್ಷಿತವಾಗಿ ವಾಹನ ಚಲಾಯಿಸಿ ಏಕೆಂದರೆ ಸಮಾಜಕ್ಕೆ ನಿಮ್ಮ ಸಾವು ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ…..

ದಯವಿಟ್ಟು ಆಲೋಚಿಸಿ ವಾಹನ ಚಲಾಯಿಸುವಂತೆ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ……

– ರಫ಼ಿ ರಿಪ್ಪನ್‌ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago