ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು

ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ.

ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು ರಾತ್ರಿ ವೇಳೆಯಲ್ಲಿ ರಸ್ತೆಗಳ ಮೇಲೆಯೇ ಮಲಗಿರುತ್ತವೆ. ಪಟ್ಟಣ, ನಗರ, ಹೆದ್ದಾರಿ ಸೇರಿದಂತೆ ಎಲ್ಲೆಂದರಲ್ಲಿ ಬಿಡಾಡಿ ಜಾನುವಾರುಗಳ ಹಾವಳಿ ಹೆಚ್ಚಾಗಿದೆ. ಕತ್ತಲೆಯಲ್ಲಿ ಇವು ಗಮನಕ್ಕೆ ಬಾರದೇ ವೇಗವಾಗಿ ಬರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸುತ್ತವೆ.ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ.

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯ ನಿರ್ವಹಿಸುವ ಮೂಲಕ ಜನಸಾಮಾನ್ಯರ ಪ್ರಶಂಸೆಗೆ ಪಾತ್ರರಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಬಿಡಾಡಿ ಜಾನುವಾರುಗಳಿಂದ ರಾತ್ರಿ ವೇಳೆ ಸಂಭವಿಸುವ ಅನಾಹುತವನ್ನು ತಪ್ಪಿಸುವ ಕೆಲಸಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.

ರಾತ್ರಿ ವೇಳೆಯಲ್ಲಾಗುವ ಅಪಘಾತದಲ್ಲಿ ಮೂಕ ಪ್ರಾಣಿಗಳು ಸಾಯುತ್ತವೆ. ಜತೆಗೆ ವಾಹನ ಸವಾರರು ಸಾಕಷ್ಟುನೋವು ಅನುಭವಿಸುತ್ತಾರೆ. ಹೀಗಾಗಿ ರಾತ್ರಿ ವೇಳೆ ರಸ್ತೆಯ ಮೇಲೆ ಜಾನುವಾರು ಇರುವುದು ಗೋಚರಿಸಲೆಂದು ರೇಡಿಯಂ ಬೆಲ್ಟ್ ನ್ನು ಅವುಗಳ ಕೊರಳಿಗೆ ಹಾಕುವ ಕೆಲಸವನ್ನು ಮಾಡುತಿದ್ದೇವೆ ಎನ್ನುತ್ತಾರೆ ಪಿಎಸ್‌ಐ ಪ್ರವೀಣ್ ಎಸ್ ಪಿ..

ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜಪ್ಪ ASI , ಉಮೇಶ್ ,ಸಂತೋಷ್ ಕೊರವರ , ಚನ್ನಪ್ಪ , ಪರಮೇಶ್ವರಪ್ಪ ಹಾಗೂ ಮಧುಸೂಧನ್ ಇದ್ದರು…

ರಿಪ್ಪನ್‌ಪೇಟೆಯ ಬಸ್‌ ನಿಲ್ದಾಣ,ಸಂತೆ ಮಾರುಕಟ್ಟೆ ಪ್ರದೇಶ ಮತ್ತು ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡುವ ದನಗಳಿಂದ ತೀವ್ರ ತೊಂದರೆಯಾಗಿದೆ. ಬಿಡಾಡಿ ದನ ಎಂದು ಕಟ್ಟಿ ಹಾಕಿದರೆ ಬಿಡಿಸಿಕೊಂಡು ಹೋಗಲು ಬರುತ್ತಾರೆ. ಹೀಗಾಗಿ ಮಾರುಕಟ್ಟೆಯಲ್ಲಿರುವ ಎಲ್ಲವೂ ಬಿಡಾಡಿ ದನಗಳಲ್ಲ. ಆದ್ದರಿಂದ ಸ್ಥಳೀಯ ಆಡಳಿತ ಅಸಲಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago